ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅ.5 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಕೃಷ್ಣಯ್ಯನವರಿಗೆ ವಿಶೇಷ ಮನವಿ ನೀಡಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶ ಮಾಡಬೇಕೆಂದು ಮನವಿಯನ್ನು ಸಲ್ಲಿಸಲಾಯಿತು ಹಾಗೇ ದೇವಸ್ಥಾನದಲ್ಲಿ ಬ್ಯಾನರ್ ಅನ್ನು ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಗಣೇಶ್ ಕೆದಿಲ,ಉಪಾಧ್ಯಕ್ಷ ರಾಜೇಶ್ ಕರೋಪಾಡಿ,ಕಾರ್ಯದರ್ಶಿ ಹರ್ಷ ವಿಟ್ಲ,ಪ್ರಶಾಂತ್ ಇರ,ಸಂಪರ್ಕ ಪ್ರಮುಖ್ ವಿಜೇಶ್ ಮುಡಿಪು ,ಪುಷ್ಪರಾಜ ಹಿಂದೂ ಯುವವಾಹಿನಿ ಹಾಗು ಚೇತನ್ ಕಡಂಬು ಉಪಸ್ಥಿತರಿದ್ದರು.