ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು ರವರು ನವರಾತ್ರಿಯ ವಿಶೇಷ ಪೂಜೆ ಸಲ್ಲಿಸಿ ಸರ್ವ ಶಕ್ತಿಗಳ ಆಶೀರ್ವಾದ ಪಡೆದರು. ಬ್ರಹ್ಮ ಬೈದೆರ್ ಮೂಲಸ್ಥಾನ ಗರಡಿಗೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಹದಿನೈದು ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಕ್ಷೇತ್ರದ ಅಧ್ಯಕ್ಷರಾದ ಜಯಂತ್ ನಡುಬೈಲ್ ಶಾಸಕರ ಸಹಕಾರ, ಅನುದಾನದ ಕೊಡುಗೆಯನ್ನು ಸ್ಮರಿಸಿ ಕ್ಷೇತ್ರದ ವತಿಯಿಂದ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಡಗನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸಂತೋಷ್, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು, ಕ್ಷೇತ್ರದ ವ್ಯವಸ್ಥಾಪಕರಾದ ದೀಪಕ್ ಸಜಿಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.