ಪುತ್ತೂರು: ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯಯಲ್ಲಿ ಅ.18 ರಂದು ನಡೆದಿದೆ.
ಬಡಗನ್ನೂರು ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್ ಮತ್ತು ಅವರ ಪತ್ನಿ ಆತ್ಮಹತ್ಯೆಗೆ ಶರಣಾದವರು.
ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿಗಳು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುಬ್ರಹ್ಮಣ್ಯ ಭಟ್ ದಂಪತಿಯ ಮಕ್ಕಳು ಬೆಳಗ್ಗೆ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೃತದೇಹವನ್ನು ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು, ಸಂಪ್ಯ ಪೊಲೀಸರು ತೆರಳಿದ್ದಾರೆ.
ಘಟನೆ ಬಗ್ಗೆ ಆತ್ಮಹತ್ಯೆಗೆ ಶರಣಾದ ಸುಬ್ರಹ್ಮಣ್ಯ ಭಟ್ ಮತ್ತು ಶಾರದಾ ದಂಪತಿಗಳ ಪುತ್ರ ನಾಗೇಶ್ ಭಟ್ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಮಾಹಿತಿ ನೀಡಿದ್ದು, ಮಾಹಿತಿಯಲ್ಲಿ ರಾತ್ರಿ ಮನೆಯವರೆಲ್ಲರೂ ಊಟ ಮುಗಿಸಿ ಕೋಣೆಯಲ್ಲಿ ಮಲಗಿದ್ದು, ತಂದೆ ಮತ್ತು ತಾಯಿ ಕೋಣೆಯಲ್ಲಿ ಮಲಗಿದ್ದರು. ಅ.18.10.2021 ರಂದು ಬೆಳಿಗ್ಗೆ 06.00 ಗಂಟೆಯಾದರೂ ಎದ್ದೇಳೆದವರನ್ನು ನನ್ನ ಪತ್ನಿ ಹೋಗಿ ನೋಡಿದಾಗ ತಾಯಿ ಶಾರದಾ ರವರು ಕುತ್ತಿಗೆಗೆ ಫ್ಯಾನಿಗೆ ನೈಲಾನ್ ಹಗ್ಗಕಟ್ಟಿ, ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿ ನೇತಾಡುತ್ತಿರುವುದನ್ನು ಕಂಡು ನನಗೆ ತಿಳಿಸಿದ್ದು, ಆ ಸಮಯ ತಂದೆ ಕಾಣದೇ ಇದ್ದು, ಅವರನ್ನು ಹುಡುಕಿದಾಗ ಮನೆಯ ಇನ್ನೊಂದು ಕೋಣೆಯಲ್ಲಿ ಫ್ಯಾನಿನ ಹಗ್ಗ ಕಟ್ಟಿ ಕುಣಿಕೆ ಮಾಡಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ತಾಯಿ ಶಾರದಾ ರವರು ಸಕ್ಕರೆ ಖಾಯಿಲೆ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ತಂದೆ ತಾಯಿಯವರಿಬ್ಬರೂ ಮನನೊಂದು ಫ್ಯಾನಿಗೆ ಹಗ್ಗಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಲ್ಲದೇ ಸದ್ರಿಯವರ ಮರಣದಲ್ಲಿ ಬೇರೆ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದ್ದಾರೆ.