ಕಡಬ: ಇಲಿ ಜ್ವರದಿಂದಾಗಿ ಕೋಡಿಂಬಾಳ ಗ್ರಾಮದ ಅರ್ಪಾಜೆ ನಿವಾಸಿ ಚಂದ್ರಶೇಖರ ರೈ(55) ಅ.17ರ ರಾತ್ರಿ ಮೃತಪಟ್ಟಿದ್ದಾರೆ.
ಅ.15 ರಂದು ಅಸ್ವಸ್ಥಗೊಂಡ ಚಂದ್ರಶೇಖರ ರವರನ್ನು ಕಡಬ ಆಸ್ಪತ್ರೆಗೆ ಕರೆತರಲಾಗಿದ್ದು, ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಅ.17ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ, ಚಂದ್ರಶೇಖರ್ ರವರಿಗೆ ಇಲಿ ಜ್ವರ ಇರುವುದು ಪುತ್ತೂರು ಆಸ್ಪತ್ರೆಯಲ್ಲಿ ಖಚಿತಗೊಂಡಿತ್ತು ಎಂದು ಮನೆಯವರು ತಿಳಿಸಿದ್ದಾರೆ.
ಮೃತರು ಪತ್ನಿ ಜಲಜಾಕ್ಷಿ, ಮಕ್ಕಳಾದ ಪ್ರಶಾಂತ್, ಪ್ರದೀಪ್, ಪ್ರಜ್ವಲ್, ಪ್ರತಿಕ್ಷಾ ರವರನ್ನು ಅಗಲಿದ್ದಾರೆ. ಮೃತರು ಕೃಷಿಕರಾಗಿದ್ದು ಜತೆಗೆ ಜಲಶೋಧನೆ ಮಾಡುವ ಕೆಲಸ ನಿರ್ವಹಿಸುತ್ತಿದ್ದರು.