ಮೈಸೂರು: ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಯುವತಿ ಆತ್ಮಹತ್ಯೆಗೂ ಮುನ್ನಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಆಕೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಶಿವರಾಜು ಕರ್ತವ್ಯ ಲೋಪ ಎಸಗಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಂಜನಗೂಡು ಠಾಣೆಯ ವೃತ್ತ ನಿರೀಕ್ಷಕರು ನೀಡಿದ ವರದಿ ಆಧಾರದ ಮೇಲೆ ಸುರೇಶ್, ಗುರುಮಲ್ಲು, ಲೋಕೇಶ್, ಜಡೆ ಮಲ್ಲಯ್ಯ, ಮಲ್ಲಿಕಾರ್ಜುನಯ್ಯ, ಗೌರಮ್ಮ, ರಾಜಮ್ಮ ಸೇರಿ ಎಎಸ್ಐ ಶಿವರಾಜು ವಿರುದ್ಧ ಎಫ್ಐಆರ್ ದಾಖಲಾಗಿದೆ.




























