ಬೆಳ್ತಂಗಡಿ: ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟ್ರೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ರವರ ಪತ್ನಿ, ಪಿಲ್ಯ ಗ್ರಾಮದ ಪದ್ಮಾಂಬಾ ನಿಲಯ ನಿವಾಸಿ ಪವಿತ್ರಾ ಕುಮಾರಿ(30.ವ) ರವರು ಅಸೌಖ್ಯದಿಂದಾಗಿ ಅ.11 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪವಿತ್ರಾ ರವರು ಪಿಲ್ಯ ಗುಡ್ ಫ್ಯೂಚರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮೆದುಳಿನ ರಕ್ತಸ್ರಾವ ಖಾಯಿಲೆಯಿಂದ ಬಳಲುತ್ತಿದ್ದ ಅವರು ಎರಡು ವರ್ಷಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಬಳಿಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಾಯಿಲೆ ಉಲ್ಬಣಗೊಂಡ ಕಾರಣ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ ಅಕ್ಷಯ್ ಕುಮಾರ್, ಮಾವ ಧರ್ಮರಾಜ್ ಜೈನ್, ಅತ್ತೆ ಶ್ರೀದೇವಿ ಡಿ ಜೈನ್, ಓರ್ವ ಪುತ್ರ ಅಯನ್ ಜೈನ್, ಪುತ್ರಿ ಐರಾ ಜೈನ್ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.