ಪುತ್ತೂರು: ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ ನಲ್ಲಿ ಅ.20 ರಂದು ರಾತ್ರಿ ನಡೆದಿದೆ.
ಪುತ್ತೂರಿನಿಂದ ವಿಟ್ಲ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನ ಕಬಕ ಜಂಕ್ಷನ್ ತಲುಪಿದಾಗ ಹಠತ್ತಾಗಿ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಪಾದಚಾರಿ ಗಂಭೀರಗೊಂಡಿದ್ದಾರೆ ಎಂದು ವರದಿಯಾಗಿದೆ.
ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.