ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದ ರಕ್ಷಿತ್ ಎಂಬಾತ ಫೇಸ್ಬುಕ್ ಮೂಲಕ ಪರಿಚಯವಾಗಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಪಾತ ಮಾಡಿಸಿದ್ದಲ್ಲದೆ, ಈಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡುತ್ತಿದ್ದಾನೆಂದು ತುಮಕೂರಿನ ವಸಂತಾ ಎಂಬ ಯುವತಿ ಪೊಲೀಸರಿಗೆ ದೂರು ನೀಡಿದ್ದರು.
![](https://zoomintv.online/wp-content/uploads/2021/01/1611036967999584-0.jpg)
ಯುವತಿಯ ಈ ದೂರಿನ ಮೇರೆಗೆ ಕ್ರಮ ಕೈಗೊಂಡ ಪೊಲೀಸರು ರಕ್ಷಿತ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾಗಿ ತಿಳಿದು ಬಂದಿದೆ.
![](https://zoomintv.online/wp-content/uploads/2021/01/1611036928391989-2.jpg)