ಪುತ್ತೂರು: ಬೆಳ್ಳಾರೆ ಮಸೀದಿಯಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡ ಘಟನೆ ಅ.20 ರಂದು ಸಂಜೆ ನಡೆದಿದೆ.
ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ ತಂಡಗಳ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟವಾಗಿದೆ.
ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ ಗಲಾಟೆ ನಡೆದ ಬಗ್ಗೆ ದೂರು ದಾಖಲಾಗಿದೆ.
ಇತ್ತಂಡದವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇವರ ಪೈಕಿ ಒಂದು ತಂಡದ ಅಜರುದ್ದೀನ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದರೇ ಇನ್ನೊಂದು ತಂಡದ ಹೈದರಾಲಿ ಮತ್ತು ಆಸಿರ್ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.



























