ಮಂಗಳೂರು: ಸಿಸಿಬಿ ಪೊಲೀಸರು ಪಬ್ವೊಂದರ ಮೇಲೆ ಅ.23 ರ ತಡರಾತ್ರಿ ದಾಳಿ ನಡೆಸಿದ್ದಾರೆ.
ಪಬ್ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಪಬ್ ಅನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು. ಜೋರಾಗಿ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್ ನಿಂದ ಹೊರಬರುವವರು ಅಶ್ಲೀಲವಾಗಿ
ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ಸಂಜೆಯಿಂದನೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.