ಪುತ್ತೂರು: ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ಅ.26 ರಂದು ಬೆಳಿಗ್ಗೆ ನಡೆದಿದೆ.
ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಭಾರೀ ಅನಾಹುತ ತಪ್ಪಿ ಹೋಗಿದೆ. ಘಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಹಿತಾಕ್ಷ ಕೆಡೆಂಜಿಕಟ್ಟ ಭೇಟಿ ನೀಡಿದರು.