ಪುತ್ತೂರು: ಬನ್ನೂರು ಗ್ರಾಮದ ನೀರ್ಪಾಜೆಯಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರಿಗೆ ಮತ್ತು ಅವರ ತಾಯಿಗೂ ಹಲ್ಲೆ ನಡೆಸಿ, ಪತ್ನಿಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಬನ್ನೂರು ಗ್ರಾಮದ ನೀರ್ಪಾಜೆ ನಿವಾಸಿ ಕೃಷ್ಣಪ್ಪ ದೂರುದಾರರು.
ಆ.23 ರಂದು ರಾತ್ರಿ ಬನ್ನೂರು ಗ್ರಾಮದ ನೀರ್ಪಾಜೆಯಲ್ಲಿ ಕೃಷ್ಣಪ್ಪ ಎಂಬವರು ಮನೆಯ ಬಳಿಗೆ ಬಂದ ಪ್ರಶಾಂತ್, ಮಹೇಶ್, ಜಗದೀಶ್, ಸಂತೋಷ್ ಎಂಬವರು ಕೃಷ್ಣಪ್ಪ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದಾಗ ತಡೆಯಲು ಹೋದ ತಾಯಿ ಮತ್ತು ಪತ್ನಿಗೆ ಕೈ ಯಿಂದ ಹಲ್ಲೆ ನಡೆಸಿದ್ದು, ಅಷ್ಟೇ ಅಲ್ಲದೇ ಅವರ ಪತ್ನಿಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಮತ್ತು ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 83/2021 ಕಲಂ 323, 324, 352,354, 503,504, 506 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.