ಮಂಗಳೂರು: ಕನ್ನಡ ಸೇನೆ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಹಾಗೂ ಮಾಜಿ ಸೈನಿಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಅ.31 ರಂದು ಮಂಗಳೂರಿನಲ್ಲಿ ನಡೆಯಲಿದೆ.
ಧ್ವಜಾರೋಹಣವನ್ನು ಕನ್ನಡ ಸೇನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಎ. ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸೇನೆಯ ಮಂಗಳೂರು ಉತ್ತರ-ವಲಯ ಅಧ್ಯಕ್ಷರಾದ ಸಂಜೀವ ಸುವರ್ಣ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಮೊಯ್ದಿನ್ ಬಾವ, ರಾಷ್ಟ್ರ ಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ವರುಣ್ ಚೌಟ, ಗೋವಾ ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ರತ್ನಾಕರ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆ ಕನ್ನಡ ಸೇನೆ ಕಾರ್ಯಾಧ್ಯಕ್ಷರಾದ ಗುರು ಚಂದ್ರ ಹೆಗ್ಡೆ ಗಂಗಾರಿ, ದಕ್ಷಿಣ ಕನ್ನಡ ಜಿಲ್ಲೆ ಕನ್ನಡ ಸೇನೆ ಪ್ರಧಾನ ಕಾರ್ಯದರ್ಶಿ ಚೆನ್ನಕೇಶವ, ದಕ್ಷಿಣ ಕನ್ನಡ ಜಿಲ್ಲೆ ಕನ್ನಡ ಸೇನೆ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ರವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.