ಉಡುಪಿ: ಮಣಿಪಾಲ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣದ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅ.16 ರಂದು ಆರ್ಯನ್ ಇಂದ್ರಾಳಿ ಫ್ಲ್ಯಾಟ್ ವೊಂದರಲ್ಲಿ ಕುಡಿದ ನಶೆಯಲ್ಲಿ ಸಂದರ್ಭದಲ್ಲಿ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ್ದ್ ಎಂದು ದೂರಲಾಗಿದ್ದು, ಈ ಬಗ್ಗೆ ಅ.17ರಂದು ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.