ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬೆನ್ನಲ್ಲೇ ದೇಶದ ಜನರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ ಖಾದ್ಯ ತೈಲ (ಅಡುಗೆ ಎಣ್ಣೆ) ದರವನ್ನು ಇಳಿಕೆ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ, ಶೇಂಗಾ ಎಣ್ಣೆ, ಸೋಯಾಬೀನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಸೇರಿದಂತೆ ಬಹುತೇಕ ಖಾದ್ಯ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ. ಪ್ರತಿ ಕೆ.ಜಿ. ಅಡುಗೆ ಎಣ್ಣೆ ಬೆಲೆಯಲ್ಲಿ 7 ರಿಂದ 20 ರೂ. ವರೆಗೆ ಕಡಿಮೆ ಮಾಡಲಾಗಿದೆ ಎಂದರು.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆ.ಜಿ ಎಣ್ಣೆಗೆ 5 ರೂ. ಕಡಿಮೆಯಾಗಿ 133 ರೂ. ಆಗಿದೆ. ಉತ್ತರ ಪ್ರದೇಶದಲ್ಲಿ 18 ರೂ. ಕಡಿಮೆಯಾಗಿ 122 ರೂ. ಆಗಿದೆ. ತಮಿಳುನಾಡಿನಲ್ಲಿ 7 ರೂ. ಕಡಿಮೆಯಾಗಿ 125 ರೂ.ಗೆ ಇಳಿದಿದೆ. ಕಡಲೆಕಾಯಿ ಎಣ್ಣೆಯ ದರದಲ್ಲಿ 5-10 ರೂ.ಗೆ ಕುಸಿದಿದ್ದು, ಸೋಯಾಬೀನ್ ಎಣ್ಣೆಯಲ್ಲಿ 5-11 ರೂ. ಕಡಿಮೆಯಾಗಿದೆ. ಸೂರ್ಯಕಾಂತಿ ಎಣ್ಣೆಯಲ್ಲಿ 5-20 ರೂ. ಗೆ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದ್ದರೂ ಕೂಡ, ರಾಜ್ಯ ಸರ್ಕಾರಗಳ ಜತೆ ಚರ್ಚೆ ನಡೆಸಿದ ಕೇಂದ್ರ ಬೆಲೆ ಇಳಿಕೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ.