ಪುತ್ತೂರು: ಯುವವಾಹಿನಿ ಮಾಣಿ ಘಟಕದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ನ.14 ರಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು.
ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವ ಅಧ್ಯಕ್ಷ ಈಶ್ವರ ಪೂಜಾರಿ ಹಿರ್ತಡ್ಕ ರವರು ಕಾರ್ಯಕ್ರಮ ಉದ್ಘಾಟಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಘಟಕದ ವತಿಯಿಂದ ಮಾಡಲಾದ ಮುಂದಿನ ವರುಷದ ಕ್ಯಾಲೆಂಡರ್ ಅನ್ನು ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.
ಘಟಕದ ಪ್ರತಿಷ್ಠಿತ ಸಂಚಿಕೆಯಾದ “ಮಾಣಿಕ್ಯ” ವನ್ನು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ರಿ ಮಾಣಿ ಇದರ ಅಧ್ಯಕ್ಷ ಸುರೇಶ ಸೂರ್ಯ ರವರು ಬಿಡುಗಡೆಗೊಳಿಸಿದರು. ಶಿಕ್ಷಣ, ಸಾಂಸ್ಕೃತಿಕ, ಸಮಾಜ ಸೇವೆ ಹಾಗೂ ಸಂಘಟನೆ ಕ್ಷೇತ್ರವು ಸೇರಿ ಒಟ್ಟು ನಾಲ್ಕು ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು.
ಸಾಧಕರನ್ನು ಸನ್ಮಾನಿಸಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಡಾಳಿತದ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ರವರು ಯುವವಾಹಿನಿ ಕೇಂದ್ರ ಸಮಿತಿಯ ಘಟಕಗಳಲ್ಲಿ ಮಾಣಿ ಘಟಕವು ಮುಂಚೂಣಿಯಲ್ಲಿದೆ. ಎಲ್ಲಾ ಕ್ಷೇತ್ರದಲ್ಲೂ ಘಟಕವು ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ ಮತ್ತು ನೂತನ ತಂಡಕ್ಕೆ ಶುಭ ಹಾರೈಸಿದರು.
ಈ ಸಾಲಿನಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಚೇತ ರವರಿಗೆ ಘಟಕದ ವತಿಯಿಂದ ಅಭಿನಂದಿಸಲಾಯಿತು. ಬಡ ಕುಟುಂಬದ ಹೆಣ್ಣು ಮಗಳ ವಿದ್ಯಾಭ್ಯಾಸಕ್ಕೆ ಘಟಕದ ವಿದ್ಯಾನಿಧಿ ಯಿಂದ ಸಹಾಯಧನ ನೀಡಲಾಯಿತು ಮತ್ತು ಘಟಕದ ವ್ಯಾಪ್ತಿಯಲ್ಲಿ ಇರುವ ಎರಡು ಗ್ರಾಮದ ನೊಂದ ಕುಟುಂಬಕ್ಕೆ ಸ್ಪಂದನ ಯೋಜನೆಯಡಿ ಸಹಾಯಧನ ಮಾಡಲಾಯಿತು.
ಘಟಕದ ಒಂದು ವರುಷದ ಪಯಣದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರನ್ನು, ಘಟಕದ ಪದಾಧಿಕಾರಿಗಳನ್ನು ಘಟಕದ ಅಧ್ಯಕ್ಷ ಪ್ರಶಾಂತ ಅನಂತಾಡಿ ರವರು ಅಭಿನಂದಿಸಿದರು. ಈ ಸಾಲಿನ ಚುನಾವಣೆ ಅಧಿಕಾರಿ ರಮೇಶ್ ಮುಜಲ ರವರು ಮುಂದಿನ ಸಾಲಿನ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಬರಮಾಡಿಕೊಂಡರು ಮತ್ತು ಯುವವಾಹಿನಿ(ರಿ.) ಕೇಂದ್ರ ಸಮಿತಿ ಎರಡನೇ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ ರವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ನೂತನ ತಂಡಕ್ಕೆ ಶುಭಹಾರೈಸಿದರು.
ಘಟಕದ ಅಧ್ಯಕ್ಷ ಪ್ರಶಾಂತ ಅನಂತಾಡಿ ರವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು ಒಂದು ವರ್ಷದಲ್ಲಿ ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ,ಸದಸ್ಯರಿಗೆ ಮತ್ತು ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ನೂತನ ಸಾಲಿನ ಅಧ್ಯಕ್ಷರಾಗಿ ಜಯಂತ ಬರಿಮಾರು, ಕಾರ್ಯದರ್ಶಿಯಾಗಿ ರೇಣುಕಾ ಕಣಿಯೂರು, ಉಪಾಧ್ಯಕ್ಷರಾಗಿ ರವಿಚಂದ್ರ ಬಾಬಣಕಟ್ಟೆ ಮತ್ತು ನಾಗೇಶ್ ಕೊಂಕಣಪದವು, ಕೋಶಾಧಿಕಾರಿಯಾಗಿ ರಾಜೇಶ್ ಎಸ್ ಬಲ್ಯ, ಜೊತೆ ಕಾರ್ಯದರ್ಶಿಯಾಗಿ ಗಾಯತ್ರಿ ಕೊಡಾಜೆ ರವರು ಆಯ್ಕೆಯಾದರು.
ನೂತನ ಅಧ್ಯಕ್ಷ ಜಯಂತ ಬರಿಮಾರು ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಘಟಕದ ಹಿರಿಮೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಯುವಂತೆ ಮಾಡಲು ಪ್ರಯತ್ನಿಸುತ್ತೇವೆ ಎಂದು ನುಡಿದರು. ವೇದಿಕೆಯಲ್ಲಿ ಕೇಂದ್ರ ಕಲೆ,ಸಾಹಿತ್ಯ ನಿರ್ದೇಶಕರಾದ ಹರೀಶ್ ಬಾಕಿಲ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಂದಿಸಿದರು. ಕಾರ್ಯದರ್ಶಿ ರಾಜೇಶ್ ಎಸ್ ಬಲ್ಯ ರವರು ಸ್ವಾಗತಿಸಿದರು. ಜನಾರ್ದನ ಕೊಡಂಗೆ ಪ್ರಾರ್ಥಿಸಿದರು. ದೀಪಕ್ ಪೆರಾಜೆ, ಸಚಿನ್ ಪೆರಾಜೆ, ದಿನಕರ್ ಅಂಚನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.