ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಜನ್ಮದಿನಾಚರಣೆಯ ಅಂಗವಾಗಿ ಇದೇ ನವೆಂಬರ್ ತಿಂಗಳಿನ 19 ನೇ ತಾರೀಕಿನಂದು ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನವನ್ನು ನಡೆಸಲಿದೆ. ಆ ದಿನ ಮೊದಲ ಹಂತದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ .
ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ನಾಯಕರಿಂದ ತೊಡಗಿ ಎಲ್ಲಾ ಕಾರ್ಯಕರ್ತರು ಅಂದು ತಮ್ಮ-ತಮ್ಮ ಭೂತ್ ಗಳಲ್ಲಿ ಸದಸ್ಯತ್ವ ಅಭಿಯಾನವನ್ನು ನಡೆಸಲಿದ್ದಾರೆ. ರಾಜ್ಯ, ಜಿಲ್ಲಾ, ಬ್ಲಾಕ್, ವಲಯ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳು ನವಂಬರ್ 19 ನೇ ತಾರೀಖಿನಂದು ತಮ್ಮ-ತಮ್ಮ ಭೂತ್ ಗಳಲ್ಲಿ ಜನಸಂಪರ್ಕವನ್ನು ನಡೆಸಿ ಪಕ್ಷಕ್ಕೆ ಹೊಸ ಸದಸ್ಯರುಗಳನ್ನು ಸೇರ್ಪಡೆಗೊಳಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಈಗಾಗಲೇ , ಇದೇ ತಿಂಗಳ 14 ನೇ ತಾರೀಖಿನಂದು ಬೆಂಗಳೂರಿನಲ್ಲಿ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಗಿತ್ತು
ಇದರಂತೆ ನಿನ್ನೆ, ನವಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಪ್ರಮುಖರ ಸಭೆ ನಡೆಸಿ 19ನೆಯ ತಾರೀಕಿನಂದು ಸದಸ್ಯತನ ಅಭಿಯಾನ ನಡೆಸುವಂತೆ ಸೂಚನೆ ನೀಡಿತ್ತು.
ಅದರಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಲಯ ಗಳ ಒಂದೊಂದು ಬೂತ್ ನಲ್ಲಿ ಇದೇ ಬರುವ ದಿನಾಂಕ 19 ರಂದು ಏಕ ಕಾಲದಲ್ಲಿ ಸದಸ್ಯತನ ಅಭಿಯಾನವನ್ನು ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ