ಪುತ್ತೂರು: ಬಡಗನ್ನೂರಿನಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರಿಗೆ ಹಾಗೂ ಸತೀಶ್ ಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾರೆ ಎಂದು ಆರೋಪಿಸಿರುವ ಕುದ್ಕಾಡಿ ನಾರಾಯಣ ರೈಯವರ ವಿರುದ್ಧ ಅಪ್ರಾಪ್ತ ಬಾಲಕಿ ದೂರು ನೀಡಿದ್ದು, ಈ ನಿಟ್ಟಿನಲ್ಲಿ ನಾರಾಯಣ ರೈ ಯವರ ಬಂಧನವಾಗಿತ್ತು. ಆರೋಪಿ ನಾರಾಯಣ ರೈ ಪರ ವಕೀಲರಾದ ಮಹೇಶ್ ಕಜೆ, ಹಾಗೂ ಆರೋಪಿ ಸತೀಶ್ ಪರ ವಕೀಲರಾದ ಕುಮಾರ್ ನಾಥ್ ವಾದಿಸಿದರು.