ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ನರಿಮೊಗರಿನಲ್ಲಿ ಶ್ರೀ ‘ಸತ್ಯಸಾಯಿ ಬಾಬಾ’ ರವರ 96ನೇ ಜಯಂತಿಯನ್ನು ಅ.23 ರಂದು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇಲ್ಲಿನ ಶಿಕ್ಷಕಿ ಸಾಯಿ ಗೀತಾ ಮಾತನಾಡಿ, ಭಗವಾನ್ ಬಾಬಾ ರವರ ಜೀವನ ಚರಿತ್ರೆ ಹಾಗೂ ಅವರು ಮಾಡಿದ ಸೇವೆಗಳನ್ನು ಸೂಕ್ತ ನಿದರ್ಶನ ಹಾಗೂ ಕಥೆಗಳ ಮೂಲಕ ತಿಳಿಸುತ್ತಾ ಬಾಬಾರವರ ಅನುಗ್ರಹವು ವಿದ್ಯಾರ್ಥಿಗಳಿಗೆ ಸದಾ ಇರಲಿ ಎಂದು ಶುಭಹಾರೈಸಿದರು.
ಶಾಲಾ ಸಂಚಾಲಕರಾದ ಭಾಸ್ಕರ ಆಚಾರ್ ಮಾತನಾಡಿ, ನಮ್ಮ ಹಿಂದೆ ಒಂದು ಶಕ್ತಿ ಇದ್ದಾಗ ಮಾತ್ರ ನಾವು ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ಎಂದು ತಿಳಿಸುತ್ತಾ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಧ್ಯಕ್ಷರಾದ ಜಯರಾಮ ಕೆದಿಲಾಯರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಇತರರಿಗೆ ಸಹಾಯ ಮಾಡುವ ಗುಣಗಳನ್ನು ಅಳವಡಿಸಿಕೊಂಡು ಸರಳ ಸಜ್ಜನಿಕೆಯ ವಿದ್ಯಾರ್ಥಿಗಳು ಆಗಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರ ಮಾತೃಶ್ರೀ
ಸುಮಿತ್ರ ಆಚಾರ್ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ ಕೆದಿಲಾಯ ಸದಸ್ಯರಾದ ಪ್ರಸನ್ನ ಭಟ್, ಹರೀಶ್ ಪುತ್ತೂರಾಯ ಉಪಸ್ಥಿತರಿದ್ದು ಶುಭಕೋರಿದರು.
ಪ್ರಶಸ್ತಿ ವಿತರಣಾ ಕಾರ್ಯಕ್ರಮ:
ಈ ಸಂದರ್ಭದಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಬಹುಮಾನ ನೀಡಿ ಗೌರವಿಸಲಾಯಿತು. ಅದೇ ರೀತಿ ದೀಪಾವಳಿ ಪ್ರಯುಕ್ತ ನಡೆದ ಗೂಡುದೀಪ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಹಾಗೂ ಸ್ಕೌಟ್ ಮತ್ತು ಗೈಡ್ ನಲ್ಲಿ ಉನ್ನತ ಶ್ರೇಣಿಯ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ರಾಜ್ಯಪುರಸ್ಕಾರ ಪ್ರಶಸ್ತಿಯನ್ನು ನೀಡಲಾಯಿತು.
ರಾಷ್ಟ್ರಮಟ್ಟದ ಯೋಗದಲ್ಲಿ ಉತ್ತಮ ಯೋಗಗುರು ಎಂದು ಪ್ರಶಸ್ತಿ ಪಡೆದ ನವೀನ್ ಕುಮಾರ್ ಮತ್ತು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅತಿಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ.ಎನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ರವಿಶಂಕರ್ ನಿರ್ವಹಿಸಿದರು. ಸಹಶಿಕ್ಷಕಿ ಪ್ರಮೀಳಾ ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯಕ್ರಮವು ಸಾಮೂಹಿಕ ಭಜನೆಯೊಂದಿಗೆ ಮುಕ್ತಾಯವಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಸಾಯಿಭಕ್ತರು ಉಪಸ್ಥಿತರಿದ್ದರು.