Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ವಾಟ್ಸಪ್ ಗ್ರೂಪ್ ಮೂಲಕ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ರೂ. ಸಂಗ್ರಹ..!!

December 24, 2021
in ಧಾರ್ಮಿಕ, ಪುತ್ತೂರು
0
ವಾಟ್ಸಪ್ ಗ್ರೂಪ್ ಮೂಲಕ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ 1.5 ಕೋಟಿ ರೂ. ಸಂಗ್ರಹ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸವಣೂರು: ಮನುಷ್ಯ ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ ಧಾರ್ಮಿಕ ಆಚರಣೆಗಳಲ್ಲಿನ ನಂಬಿಕೆ ಮಾತ್ರ ಇನ್ನೂ ಬಲವಾಗಿದೆ. ಹಾಗಾಗಿ ಪ್ರತಿಯೊಂದು ಗ್ರಾಮದಲ್ಲೂ ದೇವಸ್ಥಾನ ತಲೆಯೆತ್ತಿ ನಿಂತಿರುತ್ತದೆ. ಶ್ರದ್ಧಾಭಕ್ತಿಯಿಂದ ಪೂಜೆ, ಪುನಸ್ಕಾರಗಳು ಸದಾ ನಡೆಯುತ್ತಲೇ ಇರುತ್ತವೆ. ಹಾಗೆಯೇ ದೇವಾಲಯ ನಿರ್ಮಾಣ ಈ ಗ್ರಾಮದ ಜನರ ಕನಸಾಗಿತ್ತು. ಗ್ರಾಮದಲ್ಲಿ ಸುಂದರವಾಗಿ ಸುಬ್ರಹ್ಮಣೇಶ್ವರ ಸ್ವಾಮಿಯ ದೇವಸ್ಥಾನ ತಲೆ ಎತ್ತಬೇಕೆಂದು ಹಲವು ತಿಂಗಳುಗಳ ಕಾಲ ಗ್ರಾಮದ ಜನರು ಶ್ರಮದಾನ ಮಾಡಿದರು. ಸಾಯಾಂಕಾಲ 6 ಗಂಟೆಯಿಂದ ಪ್ರಾರಂಭ ಮಾಡಿದರೆ ಮಧ್ಯರಾತ್ರಿಯನ್ನೂ ಲೆಕ್ಕಿಸದೆ ದುಡಿಯುತ್ತಿದ್ದರು.

Advertisement
Advertisement
Advertisement

ಗ್ರಾಮಸ್ಥರ ಶ್ರಮದ ಫಲವಾಗಿ ಇದೀಗ ಭವ್ಯವಾದ ದೇವಾಲಯ ತಲೆ ಎತ್ತಿನಿಂತಿದೆ. ಸುಬ್ರಹ್ಮಣ್ಯೇಶ್ವರ ಗರ್ಭಗುಡಿಯಲ್ಲಿ ವಿರಾಜಮಾನರಾಗುವ ಕಾಲ ಸನ್ನಿಹಿತವಾಗಿದೆ. ಊರಿಗೇ ಊರೇ ಸಂಭ್ರಮದಲ್ಲಿ ಮುಳುಗೇಳುತ್ತಿದೆ. ಡಿಸೆಂಬರ್ 21ರಿಂದ ಆರಂಭವಾದ ಸುಬ್ರಹ್ಮಣೇಶ್ವರ ಸ್ವಾಮಿಯ ಬ್ರಹ್ಮಕಲಶೋತ್ಸವ ಸಂಭ್ರಮ ಡಿಸೆಂಬರ್ 28ರವೆಗೆ ನಡೆಯಲಿದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸರ್ವೆ ಸುಬ್ರಹ್ಮಣೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಭ್ರಮದ ಹಿನ್ನಲೆ. ದುರಸ್ಥಿಯಲ್ಲಿದ್ದ ಸುಬ್ರಹ್ಮಣ್ಯೇಶ್ವರ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಬೇಕೆಂದು ಸರ್ವೆಯ ಊರಿನ ಸಮಸ್ತರು ಎರಡು ವರ್ಷಗಳ ಹಿಂದೆ ನಿರ್ಧರಿಸಿದ್ದರು. ಆದರೆ ದೇವಸ್ಥಾನದ ಕೆಲಸಗಳನ್ನೆಲ್ಲಾ ಊರಿನವರು ಮಾಡಬಹುದು. ಇದಕ್ಕೆ ತಗುಲುವ ಕೋಟಿ ಗಟ್ಟಲೆ ಹಣವನ್ನು ಹೊಂದಿಸೋದು ಹೇಗೆ? ಎಂಬ ಜಿಜ್ಞಾಸೆಗೆ ಊರವರು ಬಿದ್ದಿದ್ದರು. ಈ ಸಮಯದಲ್ಲಿ ಜೀರ್ಣೋದ್ಧಾರ ಸಮಿತಿಗೆ ಮನೆ ಮನೆಗೆ ತೆರಳಿ ದೇವಸ್ಥಾನಕ್ಕೆ ನಿಧಿ ಸಂಗ್ರಹಿಸುವ ವ್ಯವಸ್ಥೆಯನ್ನೂ ಕೈಗೊಳ್ಳಲಾಗದ ಹಿನ್ನಲೆಯಲ್ಲಿ ಡಿಜಿಟಲ್ ವ್ಯವಸ್ಥೆಯಲ್ಲಿ ದೇಣಿಗೆ ಪಡೆಯಲು ದೇವಸ್ಥಾನ ಸಮಿತಿ ನಿರ್ಧರಿಸಿತ್ತು.

Advertisement
Advertisement

ಸಾಮಾಜಿಕ ಜಾಲತಾಣದ ಮೂಲಕ ದೇವಸ್ಥಾನದ ಭಕ್ತರು ಹಾಗೂ ದಾನಿಗಳನ್ನು ಸಂಪರ್ಕಿಸಲು ನಿರ್ಧರಿಸಿದ ಸಮಿತಿ ಪದಾಧಿಕಾರಿಗಳು ವಾಟ್ಸಪ್ ಮತ್ತು ಫೇಸ್ಬುಕ್ ಮೂಲಕ ಈ ಕಾರ್ಯವನ್ನು ಮಾಡಲು ಮುಂದಾಗಿದ್ದರು. ಇದಕ್ಕಾಗಿ ದೇವಸ್ಥಾನದ ಹೆಸರಿನಲ್ಲಿ ವಾಟ್ಸಪ್ ಗ್ರೂಪ್ ಗಳನ್ನು ರಚಿಸಿ ಈ ಮೂಲಕ 4 ಸಾವಿರಕ್ಕೂ ಮಿಕ್ಕಿದ ಭಕ್ತಾಧಿಗಳನ್ನು ಸಂಪರ್ಕಿಸಲಾಗಿತ್ತು.

ಈ ಸಂಪರ್ಕ ದೇವಸ್ಥಾನದ ಬ್ರಹ್ಮಕಲಶಕ್ಕೆ ಬೇಕಾದ ಅರ್ಧದಷ್ಟು ಹಣವನ್ನು ಸಂಗ್ರಹಿಸುವಲ್ಲಿ ಸಫಲವಾಗಿದೆ. ದೇವಸ್ಥಾನದ ಬಗ್ಗೆ ಏನೂ ತಿಳಿಯದ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಯಾವುದೇ ಸದಸ್ಯರ ಮುಖ ಪರಿಚಯವೂ ಇಲ್ಲದ ಊರ ಹಾಗೂ ಪರವೂರಿನ ದಾನಿಗಳು ಹಾಗು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧನ ಸಹಾಯ ಮಾಡಿದ್ದಾರೆ. ಇದೀಗ ಸುಮಾರು 1.50 ಕೋಟಿಯಷ್ಟು ಹಣವನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಗ್ರಹಿಸಿ, ಸಾಮಾನ್ಯ ಗ್ರಾಮದ ಜನರು ಅಸಾಮಾನ್ಯ ಸಾಧನೆಯನ್ನು ಮಾಡುವ ಮೂಲಕ ಗಮನಸೆಳೆದಿದ್ದಾರೆ.

ಸರ್ವೆ ಸುಬ್ರಹ್ಮಣೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿಯ ಈ ಸಾಧನೆಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾತನಾಡಿದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು “ಊರ ದೇವಸ್ಥಾನದ ಮೇಲಿನ ಪ್ರೀತಿಗೆ ಇದು ದ್ಯೋತಕವಾಗಿದೆ. ಸುಬ್ರಹ್ಮಣೇಶ್ವರ ಶಕ್ತಿಯ ಕಾರಣದಿಂದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಶ್ರೀಮಂತ-ಬಡವ ಬೇಧವಿಲ್ಲದೇ ಭಕ್ತರನ್ನುವ ಏಕ ಮಾತ್ರ ಭಾವದಿಂದ ಗ್ರಾಮಸ್ಥರು ಕೆಲಸ ಮಾಡಿದ್ದಾರೆ” ಎಂದು ಅಭಿಮಾನದಿಂದ ಹೇಳಿದ್ದಾರೆ.

ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸ್ಥಳೀಯವಾಗಿ ಹೆಚ್ಚಿನ ಸಂಖ್ಯೆಯ ಮರಗಳನ್ನು ಕಡಿಯಲಾಗಿದ್ದು, ಇದಕ್ಕಾಗಿ ಮುಂದಿನ ವನಮಹೋತ್ಸವದಲ್ಲಿ ಒಂದೊಂದು ಗಿಡಗಳನ್ನು ಊರಿನ ಪ್ರತೀ ಮನೆಗೂ ವಿತರಿಸಲು ತೀರ್ಮಾನಿಸಲಾಗಿದೆ. ದೇವಸ್ಥಾನದ ವತಿಯಿಂದ ನೀಡಲಾಗುವ ಈ ಸಸಿಗಳನ್ನು ಬೆಳೆಸುವ ಜವಾಬ್ದಾರಿಯನ್ನು ಪ್ರತಿ ಮನೆ ಮಂದಿಗೆ ನೀಡುವ ಮೂಲಕ ಪರಿಸರವನ್ನೂ ಉಳಿಸುವ ಕಾರ್ಯವನ್ನೂ ಮಾಡಲು ಈ ಸಮಿತಿ ಯೋಜನೆ ಹಾಕಿಕೊಳ್ಳುವ ಮೂಲಕ ಗಮನ ಸೆಳೆದಿದೆ. ಸುಬ್ರಹ್ಮಣೇಶ್ವರ ದೇವಳದ ವತಿಯುಂದಲೇ ಗಿಡಗಳನ್ನು ಕೊಡುವ ಕಾರಣ, ಗ್ರಾಮಸ್ಥರು ಶ್ರದ್ಧಾ ಭಕ್ತಿಯಿಂದ ಮನೆಗೆ ತೆಗೆದುಕೊಂಡು ಹೋಗಿ ಗಿಡವನ್ನು ಸಾಕಿ ಸಲಹುತ್ತಾರೆ ಎನ್ನುವ ವಿಶ್ವಾಸ ದೇವಸ್ಥಾನದ ಸಮಿತಿ ಮುಖಂಡರದ್ದಾಗಿದೆ.

ಸಾಮಾಜಿಕ ಜಾಲತಾಣಗಳು ಸಮಾಜದ ಸ್ವಾಸ್ಥ್ಯ ಕದಡುತ್ತದೆ ಎನ್ನುವ ಆರೋಪದ ನಡುವೆಯೂ, ಈ ಜಾಲತಾಣಗಳಿಂದ ಭಾರೀ ಪ್ರಯೋಜನವಾಗುತ್ತಿದೆ ಎನ್ನುವ ಮೆಚ್ಚುಗೆಯೂ ಇದೆ. ಹಾಗೆಯೇ ಇಲ್ಲಿ ಸಾಮಾಜಿಕ ಜಾಲತಾಣವನ್ನು ಸಕಾರಾತ್ಮಕವಾಗಿ ಬಳಸಿಕೊಂಡಿರುವುದು ಉತ್ತಮ ಉಪಾಯವೇ ಸರಿ. ದೇವಸ್ಥಾನವೊಂದರ ಬ್ರಹ್ಮಕಲಶಕ್ಕೆ ಬೇಕಾಗುವಷ್ಟು ನಿಧಿ ಸಾಮಾಜಿಕ ಜಾಲತಾಣದ ಸಹಾಯದಿಂದ ಸಂಗ್ರಹಿಸುವ ಮೂಲಕ ಬ್ರಹ್ಮಕಲಶ ಸಮಿತಿಯೊಂದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Previous Post

ಮಂಗಳೂರು: ಪಾರ್ಟ್ ಟೈಂ ಜಾಬ್ ಲಿಂಕ್ ಮೂಲಕ ಲಕ್ಷಾಂತರ ರೂ. ವಂಚನೆ:; ದೂರು ದಾಖಲು

Next Post

ಮಠಂತಬೆಟ್ಟು:ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ: ದೇವಿಯ ಕಾರಣಿಕ, ಕ್ಷೇತ್ರದ ಮಹಿಮೆ ಹಾಗೂ ಹಿನ್ನೆಲೆಯ ಕುರಿತಾದ “ಸಾಕ್ಷ್ಯಚಿತ್ರ” ಲೋಕಾರ್ಪಣೆ

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page