ಉಪ್ಪಿನಂಗಡಿ: ಶೌಚಾಲಯಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಬಜತ್ತೂರು ಗ್ರಾಮದ ಬೆದ್ರೋಡಿಯ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ಯುವಕನನ್ನು ಬಜತ್ತೂರು ಗ್ರಾಮದ ಬೆದ್ರೋಡಿ ದಿ.ಬಾಲಕೃಷ್ಣ ಗೌಡರವರ ಪುತ್ರ ಸುರೇಶ್(26) ಎನ್ನಲಾಗಿದೆ.
ಡಿ.30 ರಂದು ಬೆಳಿಗ್ಗೆ ಶೌಚಾಲಯಕ್ಕೆ ಹೋದವರು ಅಲ್ಲೇ ಕುಸಿದು ಬಿದ್ದಿದ್ದು, ಬಳಿಕ ಮನೆಯವರು ಶೌಚಾಲಯದ ಬಾಗಿಲು ಮುರಿದು ಒಳಪ್ರವೇಶಿಸಿ ಸುರೇಶ್ ರವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆಗೆ ಸ್ಪಂದಿಸದೆ ಸುರೇಶ್ ರವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಬೈನ್ ಎಮರೇಜ್ನಿಂದ ಸುರೇಶ್ ಮೃತಪಟ್ಟಿರುವುರುವುದಾಗಿ ತಿಳಿದು ಬಂದಿದೆ.