ವಿಟ್ಲ: ಕಳೆದ ಕೆಲವು ದಿನಗಳ ಹಿಂದೆ ಸಾಲೆತ್ತೂರಿನಲ್ಲಿ ನಡೆದ ಘಟನೆಯನ್ನು ನೆಪವಾಗಿಸಿಕೊಂಡು ರಾಜಕೀಯ ಲಾಭವನ್ನು ಪಡೆಯಲು ದುರುದ್ದೇಶದಿಂದ ಕೂಡಿದ ಈ ಬಂದ್ ನಿಂದ ನಾಗರಿಕರಿಗೆ ಆಗುವ ಕಷ್ಟವನ್ನು ತಪ್ಪಿಸಲು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ನಾಗರಿಕರಿಗೆ ಯಾವುದೇ ತೊಂದರೆ ಆಗದ ರೀತಿ ನೋಡಿಕೊಳ್ಳಬೇಕು ಎಂದು ಎಸ್ ಡಿ ಪಿ ಐ ವಿಟ್ಲ ಬ್ಲಾಕ್ ಸಮಿತಿ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಸಮಿತಿ ಉಪಾಧ್ಯಕ್ಷರಾದ ಕಲಂದರ್ ಪರ್ತಿಪ್ಪಾಡಿ, ಎಸ್ ಡಿ ಪಿ ಐ ಪುತ್ತೂರು ಕ್ಷೇತ್ರ ಸಮಿತಿ ಕಾರ್ಯದರ್ಶಿ ಅನ್ವರ್ ಪೆರುವಾಯಿ, ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ರಹೀಮ್ ಕಂಬಳಬೆಟ್ಟು ,ಬ್ಲಾಕ್ ಸಮಿತಿ ಕಾರ್ಯದರ್ಶಿ ಮುನೀರ್ ಎಂ ಕೆ, ವಿಟ್ಲ ಪಟ್ಟಣ ಸಮಿತಿ ಕಾರ್ಯದರ್ಶಿ ಸಿರಾಜ್ ಕಡಂಬು ಉಪಸ್ಥಿತರಿದ್ದರು.