ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಜ.14 ರಂದು ವಿಶೇಷ ಬಲಿ ಉತ್ಸವ ಮತ್ತು ಕನಕಾಭಿಷೇಕ ನಡೆಯಿತು.
ಸಂಜೆ ಶ್ರೀ ದೇವರ ಉತ್ಸವ, ವಾದ್ಯ, ಚೆಂಡೆ ಉತ್ಸವ ಬಳಿಕ ಶ್ರೀ ಉಳ್ಳಾಲ್ತಿ ನಡೆಯಲ್ಲಿ ಶ್ರೀ ದೇವರ ಉತ್ಸವ ಮೂರ್ತಿಗೆ ಸುವಸ್ತು ಕನಕಾಭಿಷೇಕ ಸಮರ್ಪಣೆ ಮಾಡಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ರವರು ಶ್ರೀ ದೇವರ ಉತ್ಸವ ಮೂರ್ತಿಗೆ ಕನಕಾಭಿಷೇಕ ಚಿಮ್ಮಿಸಿದರು. ನಂತರ ವಸಂತ ಕಟ್ಟೆಯಲ್ಲಿ ಭಕ್ತರಿಗೆ ಕನಕಾಭಿಷೇಕದ ಪ್ರಸಾದ ವಿತರಣೆ ಮಾಡಲಾಯಿತು. ವೈದಿಕ ಕಾರ್ಯಕ್ರಮವನ್ನು ದೇವಳದ ಪ್ರಧಾನ ಅರ್ಚಕರೂ ಸಮಿತಿಸ ಸದಸ್ಯರೂ ಆಗಿರುವ ವೇ ಮೂ ವಿ.ಎಸ್ ಭಟ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ಸುಧಾ ಎಸ್ ರಾವ್, ವೀಣಾ ಬಿ.ಕೆ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಶೇಖರ್ ನಾರಾವಿ, ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.