ಉಡುಪಿ: ಜಿಲ್ಲೆಯಿಂದ ಶಬರಿಮಲೆ ಸನ್ನಿಧಾನಕ್ಕೆ ತೆರಳಿದ್ದ ಮಾಲಾಧಾರಿಯೋರ್ವರು ಬೆಟ್ಟು ಹತ್ತುವಾಗ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ.
ಸುರೇಶ್ ಬಂಗೇರ ( 52)ಹೃದಯಾಘಾತದಿಂದ ಸಾವಿಗೀಡಾದ ಮಾಲಾಧಾರಿ. ಜಿಲ್ಲೆಯ ಉದ್ಯಾವರದ ಈ ಮಾಲಾಧಾರಿ ಇಲ್ಲಿಯ ಅಯ್ಯಪ್ಪ ಮಂದಿರದಿಂದ 32 ಸ್ವಾಮಿಗಳ ಜೊತೆ ಇರುಮುಡಿ ಕಟ್ಟಿ ನಿನ್ನೆ ರೈಲು ಮಾರ್ಗದ ಮೂಲಕ ಶಬರಿ ತಲುಪಿದ್ದರು.
ಇಂದು ದೇವರ ದರ್ಶನಕ್ಕೆ ಬೆಟ್ಟ ಹತ್ತಿ ಹೊರಟ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ರಿಕ್ಷಾ ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಮಾಲಾಧಾರಿ ಸುರೇಶ್ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.