ಪುತ್ತೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಕುಂಬ್ರ ಇದರ ನೂತನ ಕಚೇರಿಯು ಸ್ಥಳಾಂತರಗೊಂಡು ಅಕ್ಷಯ ಆರ್ಕೇಡ್ ನಲ್ಲಿ ಜ.24 ರಂದು ಶುಭಾರಂಭಗೊಳ್ಳಲಿದೆ.
ನೂತನ ಕಚೇರಿಯ ಉದ್ಘಾಟನೆಯನ್ನು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಆರ್.ಸಿ. ನಾರಾಯಣ ರೆಂಜ ರವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಲಿದ್ದಾರೆ.
ನೂತನ ಲಾಕರ್ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ರವರು ನೆರವೇರಿಸಲಿದ್ದು, ಠೇವಣಿ ಪತ್ರವನ್ನು ದ.ಕ. ಮೂರ್ತೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಂಕುತಳಾ ಶೆಟ್ಟಿ, ಅಕ್ಷಯ ಗ್ರೂಪ್ಸ್ ನ ಜಯಂತ ನಡುಬೈಲು, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿರುವ ಸುಕನ್ಯಾ, ಆಕರ್ಷಣ್ ಇಂಡಸ್ಟ್ರೀಸ್ ನ ಮಾಲಕರಾದ ಕೆ.ಪಿ. ಸಾದಿಕ್ ಕುಂಬ್ರ, ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ರೈ ಕುಂಬ್ರ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತ್ರಿವೇಣಿ ಪಲ್ಲತ್ತಾರು ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.