ಪುತ್ತೂರು: ಹಿಜಾಬ್ ಪ್ರಕರಣವನ್ನು ಎನ್.ಐ.ಎ. ತನಿಖೆಗೆ ವಹಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ಭಾರಿ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ ಇದೊಂದು ಜಿಹಾದಿನ ಷಡ್ಯಂತ್ರ, ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ ಕಾಲೇಜುಗಳನ್ನು ಉಪಯೋಗಿಸಿ ಪ್ರತ್ಯೇಕತಾವಾದವನ್ನು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಪ್ರಕರಣದ ಹಿಂದೆ ದೇಶದ್ರೊಹಿ ಸಂಘಟನೆಗಳಾದ PFI ಮತ್ತು SDPI ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, CFI [Campus Front of India] ಎಂಬ ಮುಸ್ಲಿಂ ಮೂಲಭೂತವಾದಿಗಳ ವಿದ್ಯಾರ್ಥಿ ಸಂಘಟನೆ ಉಡುಪಿ ಮತ್ತು ಮಣಿಪಾಲದ ರಹಸ್ಯ ಸ್ಥಳದಲ್ಲಿ ಹಿಜಾಬ್ ಧರಿಸಲು ಅನುಮತಿ ಕೇಳಬೇಕು ಮತ್ತು ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸಲು ಯುವತಿಯರಿಗೆ ತರಬೇತಿ ನೀಡಿದ್ದಾರೆ.ಅಲ್ಲದೆ ಇದರ ಹಿಂದೆ ಪಾಕಿಸ್ತಾನ, ಅಫಘಾನಿಸ್ತಾನ- ತಾಲಿಬಾನಿ ಮಾನಸಿಕತೆಯ ಇಸ್ಲಾಂ ಮೂಲಭೂತವಾದಿಗಳು ಬೆಂಬಲ ಕೊಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಮುಸ್ಲಿಂ ದೇಶಗಳೆಂದೇ ಬಿಂಬಿತವಾಗಿರುವ ದೇಶಗಳಲ್ಲಿ ಹಿಜಾಬ್ ಬುರ್ಖಾ ಕಡ್ಡಾಯವಿಲ್ಲದಾಗ ಭಾರತದ ಹಿಜಾಬ್ ವಿಷಯವನ್ನ ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸುವಂತಹ ಕೆಲಸವಾಗುತ್ತಿದೆ. ಹೈಕೋರ್ಟ್ ನೀಡಿದ ಮಧ್ಯಂತರ ತೀರ್ಪನ್ನು ಪಾಲಿಸದೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದು ಇವರ ಜಿಹಾದಿ ಮಾನಸಿಕತೆಯನ್ನು ತೋರಿಸುತ್ತಿದೆ.
ನವೆಂಬರ್ ತಿಂಗಳಲ್ಲಿ ಹಿಜಾಬ್ ವಿವಾದ ಎಬ್ಬಿಸಿದ ಯುವತಿಯರು ಟ್ವಿಟರ್ ಅಕೌಂಟ್ ತೆರೆದು ರಾಷ್ಟ್ರ ವಿರೋಧಿ ಸಂದೇಶ ಪೋಸ್ಟ್ ಮಾಡುವುದರೊಂದಿಗೆ CFI ಸಂಘಟನೆ ಮಾಡುವ ಎಲ್ಲ ಟ್ವೀಟ್ ಗಳಿಗೆ ರಿಟ್ವೀಟ್ ಮಾಡುವುದರ ಹಿಂದೆ ಈ ಯುವತಿಯರು ಹಿಜಾಬ್ ಪ್ರಕರಣ ಟ್ರೆಂಡ್ ಮಾಡಲು ವ್ಯವಸ್ಥಿತ ಸಂಚು ಮಾಡಿರುವುದರ ಹಿಂದೆ ಅಂತಾರಾಷ್ಟ್ರೀಯ ಇಸ್ಲಾಂ ಮೂಲಭೂತ ಸಂಘಟನೆಗಳ ಕೈವಾಡವಿರುವುದು ಜಗದ್ಜಾಹಿರಾಗಿದೆ ಉಚ್ಛ ನ್ಯಾಯಾಲಯ ನೀಡಿರುವ ಮದ್ಯಾಂತರ ತೀರ್ಪನ್ನು ಕೇವಲ ವಿದ್ಯಾರ್ಥಿನಿಯರು ಅಲ್ಲದೆ ಮುಸ್ಲಿಂ ಶಿಕ್ಷಕಿಯರು ಹಿಜಾಬ್ ಧರಿಸಿ ಬರುತ್ತಿದ್ದು ಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಿರುವುದು ಸಾರ್ವಜನಿಕರಿಗೆ ಆತಂಕವಾಗಿದೆ.
ಈ ಹಿನ್ನಲೆಯಲ್ಲಿ ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಮಾಡಲು ಹಾಗೂ ಕೋಮುಗಲಭೆ ಸೃಷ್ಟಿಸಿ ಇಡಿ ಕರ್ನಾಟಕವನ್ನ ಭಯಗ್ರಸ್ಥ ಮಾಡಿ ಶಾಂತಿ ಕದಡಲು ಹೊರಟಿರುವ ಸಂಚನ್ನ ವಿಫಲಗೊಳಿಸಿ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಪ್ರಕರಣವನ್ನು ಪ್ರಾರಂಭಿಸಿದ 6 ವಿದ್ಯಾರ್ಥಿನಿಯರನ್ನು ಮತ್ತು ಅವರಿಗೆ ಬೆಂಬಲವಾಗಿ ನಿಂತು ಈ ಸಂಚನ್ನು ರೂಪಿಸಿದವರ ವಿರುದ್ಧ NIA ( ರಾಷ್ಟ್ರೀಯ ತನಿಖಾ ದಳ ) ಮುಖಾಂತರ ತನಿಖೆಯ ನಡೆಸಲು ಆದೇಶಿಸಬೇಕು ಮತ್ತು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್,ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಹ ಸಂಯೋಜಕ್ ಪ್ರವೀಣ್ ಕಲ್ಲೇಗ, ಪುತ್ತೂರು ಗ್ರಾಮಾಂತರ ಪ್ರಖಂಡ ಸಂಯೋಜಕ್ ವಿಶಾಕ್ ಸಸಿಹಿತ್ಲು ಉಪಸ್ಥಿತರಿದ್ದರು.