ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಜೆಸಿಐ ವತಿಯಿಂದ ಭವಿಷ್ಯದ ರೂಪುರೇಷೆಯ ಕಾರ್ಯಾಗಾರವನ್ನು ಪುತ್ತೂರಿನ ಜೆಸಿಐ ಅಧ್ಯಕ್ಷರಾದ ಜೆಸಿ. ಶಶಿರಾಜ್ ರೈ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಜೆಸಿಐ ಇದರ ರಾಷ್ಟೀಯ ತರಬೇತುದಾರ ಜೆಸಿ. ಕೃಷ್ಣಮೋಹನ್ ಪಿ. ಎಸ್. ರವರು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ದಿಯ ಮಾಹಿತಿಯನ್ನು ನೀಡಿ, ವಿದ್ಯಾಭ್ಯಾಸದ ಜೊತೆಗೆ ಸಮಾಜದಲ್ಲಿ ತಮ್ಮ ಭವಿಷ್ಯವನ್ನು ಯಾವ ರೀತಿಯಾಗಿ ರೂಪಿಸಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅಕ್ಷಯ ಕಾಲೇಜಿನ ಆಧ್ಯಕ್ಷರಾದ ಜಯಂತ್ ನಡುಬೈಲು ರವರು ಮಾತನಾಡಿ, ಈ ಕಾರ್ಯಗಾರದಲ್ಲಿ ಭಾಗವಹಿಸಿ, ನಿಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಮಕ್ಕಳನ್ನು ಉದ್ದೇಶಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಜೆಸಿಐ ಪ್ರತಿನಿಧಿಗಳು, ಕಾಲೇಜಿನ ಪ್ರಾಂಶುಪಾಲರು, ಆಡಳಿತಾಧಿಕಾರಿ ಹಾಗೂ ಉಪನ್ಯಾಸಕ ವೃಂದದವರು ಹಾಜರಿದ್ದು, ವಿದ್ಯಾರ್ಥಿನಿಯರು ಪ್ರಾರ್ಥಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸ್ವರ್ಣಜೋಶ್ನಾ ರವರು ಅತಿಥಿಗಳನ್ನು ಪರಿಚಯಿಸಿದರು.