ಮಂಗಳೂರು: ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ನಡೆದಿದೆ.
ಮೃತ ಸವಾರನನ್ನು ಕಡಬ ನಿವಾಸಿ, ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಕನ್ಟ್ರಕ್ಷನ್ ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ.
ಸಚಿನ್ ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದಾಗ ಬಪ್ಪನಾಡು ಬಳಿ ನಿಯಂತ್ರಣ ತಪ್ಪಿ ಬೈಕ್ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆಡಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























