ಕಾಪು: ಯುವಕನೊಬ್ಬ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉದ್ಯಾವರ ಗ್ರಾಮದ ಶಂಭುಕಲ್ಲು ದೇವಸ್ಥಾನದ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಚಿನ್ ಭಂಡಾರಿ (28) ಎನ್ನಲಾಗಿದೆ.
ಸಚಿನ್ ಲೈನ್ ಸೇಲ್ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ಅವರ ಕುಟುಂಬಕ್ಕೆ ಸೇರಿದ ಮನೆ ಕುಸಿದು ಬಿದ್ದಿರುವುದರಿಂದ ಸಚಿನ್ ತಮ್ಮ ಪೋಷಕರೊಂದಿಗೆ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಮನೆ ಕುಸಿದು ಬಿದ್ದಿರುವುದು ಹಾಗೂ ಪೋಷಕರ ಅನಾರೋಗ್ಯದಿಂದ ಸಚಿನ್ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.