ಸುಳ್ಯದಿಂದ ಮಂಗಳೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬರುತ್ತಿದ್ದ ಯುವತಿಗೆ ಸೀಟಿನ ಪಕ್ಕದಲ್ಲಿ ಕುಳಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದು, ಯುವತಿ ನೀಡಿದ ದೂರಿನಂತೆ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತನನ್ನು ಹಾವೇರಿ ಮೂಲದ ವಾಜಿದ್ ಎ ಜಮಖಾನಿ ಎಂದು ಗುರುತಿಸಲಾಗಿದೆ.
ಮಾ.19 ರಂದು ಮಧ್ಯಾಹ್ನ ಸುಳ್ಯದಿಂದ ಮಂಗಳೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿ ಬರುತ್ತಿದ್ದ ವೇಳೆ ಆರೋಪಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಇದರಿಂದ ನೊಂದ ಯುವತಿ ಆರೋಪಿಯ ವಿರುದ್ಧ ಮಾನಹಾನಿ ಮಾಡಿ ಕಿರುಕುಳ ನೀಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.