ಬಂಟ್ವಾಳ: ಸಾಮೂಹಿಕ ಶನೈಶ್ವರ ಪೂಜಾ ಸಮಿತಿ ಮೂರ್ಜೆ ಹಾಗೂ ಹಿಂದೂ ಜಾಗರಣ ವೇದಿಕೆ ಮೂರ್ಜೆ ವತಿಯಿಂದ 17ನೇ ವರ್ಷದ ಸಾಮೂಹಿಕ ಶನೈಶ್ವರ ಪೂಜೆ ಮೂರ್ಜೆ ಅಶ್ವಥ ಕಟ್ಟೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಹಿಂ.ಜಾ.ವೇ. ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು,ರವಿ ಅಲ್ಲಿಪಾದೆ, ಶನೈಶ್ಚರ ಸಮಿತಿ ಅಧ್ಯಕ್ಷ ಶ್ರೀನಿವಾಸ ಹಾಗೂ ಸಮಿತಿ ಸದಸ್ಯರು ಮತ್ತು ಹಿಂ.ಜಾ.ವೇ. ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
































