Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ..!!

April 13, 2022
in ರಾಜ್ಯ
0
ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಸರ್ಕಾರವೇ ಕೊಲೆ ಮಾಡಿದೆ: ಗುತ್ತಿಗೆದಾರರ ಸಂಘ ಆಕ್ರೋಶ, ಮುಷ್ಕರಕ್ಕೆ ನಿರ್ಧಾರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಅವರದ್ದು ಆತ್ಮಹತ್ಯೆ ಅಲ್ಲ, ಅದು ಸರ್ಕಾರವೇ ಮಾಡಿರುವ ಕೊಲೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು.

Advertisement
Advertisement

ಚಾಮರಾಜಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ. ಈ ಭ್ರಷ್ಟಾಚಾರ ಖಂಡಿಸಿ ನಾವು ಒಂದು ತಿಂಗಳು ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದರು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ. ಬಿಜೆಪಿ ಸರ್ಕಾರವು ರೌಡಿಸಂ ಮಾಡುತ್ತಿದೆ. ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ ಸರ್ಕಾರ ತೊಂದರೆ ಕೊಡಬಹುದು ಎನ್ನುವ ಕಾರಣಕ್ಕೆ ಅವನ್ನು ಒದಗಿಸುತ್ತಿಲ್ಲ. ಪ್ರತಿ ಟೆಂಡರ್‌ಗೂ ಕನಿಷ್ಠ ಶೇ 5ರ ಕಮಿಷನ್ ಕೊಡಬೇಕಿದೆ. ಮುಖ್ಯಮಂತ್ರಿ ಕಚೇರಿಯಲ್ಲಿಯೇ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆರೋಗ್ಯ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಗುತ್ತಿಗೆದಾರರನ್ನು ಕಾಡುತ್ತಿರುವ ಭ್ರಷ್ಟಾಚಾರ ಸಮಸ್ಯೆಗಳನ್ನು ಪರಿಹರಿಸದಿದ್ದರೆ 15 ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡಲಾಗುವುದು ಎಂದು ಎಚ್ಚರಿಸಿದರು.

ನಾವು ಸರ್ಕಾರವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿಲ್ಲ. ನಮ್ಮ ಮಾತು ಸಂಪೂರ್ಣ ಸತ್ಯ. ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್‌ ಅತ್ಯಂತ ಭ್ರಷ್ಟ ಮಂತ್ರಿ. ಅವರು ಪ್ರತಿ ಕಾಮಗಾರಿಗಳಲ್ಲಿಯೂ ಶೇ 5ರ ಕಮಿಷನ್ ಪಡೆಯುತ್ತಿದ್ದಾರೆ ಎಂದರು.

Advertisement

ಗುತ್ತಿಗೆಯನ್ನು ಇಂಥವರಿಗೇ ನೀಡಬೇಕೆಂದು ಸಚಿವರು ಮೊದಲೇ ನಿರ್ಧರಿಸುತ್ತಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಕೋಟಿ ವೆಚ್ಚದ ಕಾಮಗಾರಿ ನಡೆದಿದೆ. ಅಷ್ಟು ದೊಡ್ಡಮೊತ್ತದ ಹಣ ವೆಚ್ಚ ಮಾಡಿದರೂ ಕಾಮಗಾರಿ ಕಳಪೆಯಾಗಿದೆ ಎಂದು ಉದಾಹರಣೆ ನೀಡಿದರು.

ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮೇ 25ರಿಂದ ಒಂದು ತಿಂಗಳ‌ ಕಾಲ ಕಾಮಗಾರಿ ಸ್ಥಗಿತಗೊಳಿಸುತ್ತೇವೆ. ಮುಖ್ಯಮಂತ್ರಿಗಳು ಮೌನಿಯಾಗಿದ್ದಾರೆ. ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಟೆಂಡರ್ ಪಡೆಯಲು 5 ಪರ್ಸೆಂಟ್ ಕೊಡಬೇಕಾಗುತ್ತದೆ. ಆರೋಗ್ಯ ಇಲಾಖೆ ಸಚಿವರೇ ಪರ್ಸೆಂಟೇಜ್ ಪಡೆಯುತ್ತಾರೆ. ಇಂದು ದಾಖಲೆಗಳನ್ನು ಬಿಡುಗಡೆ ಮಾಡುವ ಉದ್ದೇಶವಿತ್ತು. ಆದರೆ ಜೀವ ಬೆದರಿಕೆ ಬರುವ ಸಾಧ್ಯತೆಯಿದ್ದ ಕಾರಣ ದಾಖಲೆ ಬಿಡುಗಡೆ ಮಾಡಿಲ್ಲ ಎಂದರು.

ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಬಿಬಿಎಂಪಿ ಮತ್ತು ನೀರಾವರಿ ಇಲಾಖೆಗಳಲ್ಲಿ ಸಚಿವರೇ ಏಜೆಂಟ್​ಗಳನ್ನು ಗುರುತಿಸಿದ್ದಾರೆ. ಮುಖ್ಯಮಂತ್ರಿ ಕಚೇರಿಯೂ ಇದಕ್ಕೆ ಹೊರತಾಗಿಲ್ಲ. ಪರ್ಸೇಂಟೇಜ್ ನೀಡಿರುವ ಬಗ್ಗೆ ಆಡಿಯೊ ಸೇರಿದಂತೆ ಹಲವು ದಾಖಲೆಗಳಿವೆ ಎಂದು ವಿವರಿಸಿದರು. ಆರೋಗ್ಯ ಸಚಿವ ಸುಧಾಕರ್ ಅವರ ಕುಟುಂಬದ ಸದಸ್ಯರೇ ಶೇ 60ರಷ್ಟು ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಸಚಿವರ ಪತ್ನಿಯೇ ಕಾಮಗಾರಿಗಳಿಗೆ ಚೆಕ್ ನೀಡುತ್ತಾರೆ. ಚಿತ್ರದುರ್ಗ ಜಿಲ್ಲೆಯ ಶಾಸಕರೊಬ್ಬರ ಮಗ ಡಾಕ್ಟರ್ ಹುದ್ದೆ ಬಿಟ್ಟು ಗುತ್ತಿಗೆದಾರರಾಗಿದ್ದಾರೆ ಎಂದು ದೂರಿದರು. ನಮ್ಮ ಆರೋಪಗಳ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಸೂಕ್ತ ದಾಖಲೆ ಒದಗಿಸುತ್ತೇವೆ. ನಾವು ದಾಖಲೆಗಳನ್ನು ಬಿಡುಗಡೆ ಮಾಡಿದಾಗ ಸುಧಾಕರ್ ಸಚಿವ ಸ್ಥಾನ ಕಳೆದುಕೊಳ್ಳುತ್ತಾರೆ ಎಂದರು.

ಸಂಘದ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ, ಸಚಿವರು ಮತ್ತು ಶಾಸಕರು ನಮ್ಮನ್ನು ಬೆದರಿಸುವುದನ್ನು ಬಿಡಬೇಕು. ರಾಜ್ಯದಲ್ಲಿ ಕಾಮಗಾರಿಗಳ ಗುಣಮಟ್ಟ ಕಳಪೆಯಾಗುತ್ತಿದೆ. ಇದಕ್ಕೆ ಪರ್ಸೆಂಟೇಜ್ ಹಾವಳಿಯೇ ಕಾರಣ ಎಂದರು.

Previous Post

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ: ಸಚಿವ ಈಶ್ವರಪ್ಪಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ..!!

Next Post

ಬ್ಯುಸಿನೆಸ್ ಮೀಟಿಂಗ್ ಅಂತ ಹೋದ ಯುವತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆ..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025

Leave a Reply Cancel reply

Your email address will not be published. Required fields are marked *

Recent News

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

May 25, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.