ವಿಟ್ಲ: ವಿಶ್ವ ಹಿಂದು ಪರಿಷದ್, ಬಜರಂಗದಳ ವಿಟ್ಲ ಪ್ರಖಂಡ, ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ವತಿಯಿಂದ ಶ್ರೀ ರಾಮನವಮಿಯ ಪ್ರಯುಕ್ತ, ಶ್ರೀ ರಾಮ ಭಜನಾಮೃತ ಕಾರ್ಯಕ್ರಮವು ಮೇ.1 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಎ.14 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಮೇ.1 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಜನಾ ಕಾರ್ಯಕ್ರಮ ನೆರವೇರಲಿದೆ.
ಶ್ರೀ ಮೋಹನದಾಸ ಸ್ವಾಮೀಜಿ, ಶ್ರೀ ಧಾಮ ಮಾಣಿಲ, ವಿಟ್ಲ ಅರಮನೆಯ ಬಂಗಾರು ಅರಸರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮೋತ್ಸವ ಸಮಿತಿ ವಿಟ್ಲ ಇದರ ಅಧ್ಯಕ್ಷರಾದ ಚರಣ್ ಕಾಪುಮಜಲು ರವರು ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ರಾವಣ ದಹನ ನಡೆಯಲಿದೆ.