ಉಡುಪಿ: ಕಾನೂನು ಸುವ್ಯವಸ್ಥೆ ಹಿನ್ನೆಲೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಉಡುಪಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಪ್ರವೇಶಕ್ಕೆ ಇಂದಿನಿಂದ ನಿರ್ಬಂಧ ಹೇರಿದೆ. ಈ ನಡುವೆ ಪ್ರಮೋದ್ ಮುತಾಲಿಕ್ ನಿರ್ಬಂಧದ ದಿನಕ್ಕಿಂದ ಒಂದು ದಿನ ಮುಂಚೆಯೇ ಗಂಗೊಳ್ಳಿಯಲ್ಲಿ ಪ್ರತ್ಯಕ್ಷರಾಗಿದ್ದು, ಇದೀಗ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಿಂದೂ ಜಾಗರಣ ವೇದಿಕೆ ಕುಂದಾಪುರ ತಾಲೂಕು ಗಂಗೊಳ್ಳಿಯ ಬೀರೇಶ್ವರ ದೇವಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಮೋದ್ ಮುತಾಲಿಕ್ ಆಗಮಿಸಬೇಕಿತ್ತು. ಆದರೆ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲು ಉಡುಪಿ ಜಿಲ್ಲಾಡಳಿತ ಪ್ರಮೋದ್ ಮುತಾಲಿಕ್ ಗೆ ಎಪ್ರಿಲ್ 15 ರಿಂದ ಉಡುಪಿಗೆ ನಿರ್ಬಂಧ ಹೇರಿತ್ತು.
ಆದರೆ ಜಿಲ್ಲಾಡಳಿತ ನಿರ್ಬಂಧ ಹಿನ್ನೆಲೆ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಪ್ರತ್ಯಕ್ಷರಾಗಿದ್ದಾರೆ.
ನಿನ್ನೆ ರಾತ್ರಿಯೇ ಗಂಗೊಳ್ಳಿಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.