ಮಂಗಳೂರು: ನಗರದ ಹಂಪನಕಟ್ಟೆ ಬಳಿ ಬೈಕ್ಗೆ ಖಾಸಗಿ ಬಸ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಟ್ರಾಫಿಕ್ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿಸಲ್ಪಟ್ಟ ಚಾಲಕನನ್ನ ಬಿಜು ಮೋನು ಎನ್ನಲಾಗಿದೆ.
ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಚಾಲಕನನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಎ. 26ರ ವರೆಗೆ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎ.8 ರಂದು ಸುರತ್ಕಲ್ ಜನತಾ ಕಾಲನಿಯಿಂದ ರೂಟ್ ನಂಬರ್ 45 ಜಿ ಸಂಖ್ಯೆಯ ಖಾಸಗಿ ಬಸ್ ಅನ್ನು ಬಿಜು ಚಲಾಯಿಸಿಕೊಂಡು ಬರುತ್ತಿದ್ದರು. ಹಂಪನಕಟ್ಟೆ ಬಳಿ ಬರುವಾಗ ಬಳ್ಳಾಲ್ಬಾಗ್ ನಿವಾಸಿ ಡೇಲನ್ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ಗೆ ಬಸ್ ಡಿಕ್ಕಿಯಾಗಿ ಬಸ್ ಮತ್ತು ಬೈಕ್ ಎರಡೂ ಬೆಂಕಿಗೆ ಆಹುತಿಯಾಗಿದ್ದವು.