ಮೈಸೂರು: ಪರೀಕ್ಷೆಗೆ ಹೆದರಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ನಡೆದಿದೆ.
ಹನುಮಂತ ನಗರದ ರಾಮು ಎಂಬವರ ಪುತ್ರಿ ಅನು(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
![](https://zoomintv.online/wp-content/uploads/2022/04/IMG_20220424_091814.jpg)
ಅನು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಓದಿನಲ್ಲೂ ಸಹ ಇವರು ಮುಂದಿದ್ದರು ಎನ್ನಲಾಗಿದೆ.
ಪರೀಕ್ಷೆ ಇದೆ ಓದಿಕೊಳ್ಳಬೇಕು ಎಂದು ಹೇಳಿ ರೂಂಗೆ ತೆರಳಿದ್ದಾರೆ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವಿಷಯ ತಿಳಿದು ತಂದೆ ತಾಯಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.