Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಹಿಂದಿ ವಿವಾದ: ಸುದೀಪ್ ವರ್ಸಸ್ ಅಜಯ್ ದೇವಗನ್ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ..?? ಇಲ್ಲಿದೆ ವಿವರ..

April 28, 2022
in ರಾಜ್ಯ, ರಾಷ್ಟ್ರೀಯ, ಸಿನಿಮಾ
0
ಹಿಂದಿ ವಿವಾದ: ಸುದೀಪ್ ವರ್ಸಸ್ ಅಜಯ್ ದೇವಗನ್ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ..?? ಇಲ್ಲಿದೆ ವಿವರ..
Share on WhatsAppShare on FacebookShare on Twitter
Advertisement
Advertisement
Advertisement

ಹಿಂದಿ ರಾಷ್ಟ್ರ ಭಾಷೆ ಹೌದೋ ಅಲ್ಲವೋ ಎಂಬ ಬಗ್ಗೆ ಈಗ ದೇಶಾದ್ಯಂತ ಚರ್ಚೆ ಶುರುವಾಗಿದೆ. ಉತ್ತರ ಭಾರತದಲ್ಲಿ ಹಿಂದಿ ಪ್ರಾಬಲ್ಯವಿದೆ ಎಂದ ಮಾತ್ರಕ್ಕೆ ಅದನ್ನು ರಾಷ್ಟ್ರ ಭಾಷೆ (National Language) ಎನ್ನಲು ಸಾಧ್ಯವಿಲ್ಲ. ಆದರೆ ಅದೇ ನಮ್ಮ ರಾಷ್ಟ್ರ ಭಾಷೆ ಎಂದು ಅಜಯ್ ದೇವಗನ್ ಬಿಂಬಿಸುತ್ತಿದ್ದಾರೆ. ಆ ವಾದಕ್ಕೆ ದಕ್ಷಿಣ ಭಾರತದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಕಿಚ್ಚ ಸುದೀಪ್ (Kichcha Sudeep) ಕೂಡ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದನ್ನು ಒತ್ತಿ ಹೇಳಿದರು. ಅವರ ಹೇಳಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ಇದೇ ವಿಚಾರವಾಗಿ ಈಗ ಅನೇಕ ಸೆಲೆಬ್ರಿಟಿಗಳು ಧ್ವನಿ ಎತ್ತುತ್ತಿದ್ದಾರೆ. ಸತೀಶ್ ನೀನಾಸಂ, ನಟಿ ರಮ್ಯಾ ಸೇರಿದಂತೆ ಹಲವರು ಸುದೀಪ್ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಅಜಯ್ ದೇವಗನ್ (Ajay Devgn) ಅವರ ಮಾತುಗಳಿಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಅಷ್ಟಕ್ಕೂ ಸುದೀಪ್ ಅವರು ಈ ವಿಚಾರ ಪ್ರಸ್ತಾಪ ಮಾಡಿದ್ದು ಎಲ್ಲಿ..? ಒಟ್ಟಾರೆಯಾಗಿ ಈ ಕಾಂಟ್ರವರ್ಸಿ ಹೇಗೆ ಶುರುವಾಯ್ತು..? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ..

ಅದು ರಾಮ್ ಗೋಪಾಲ್ ವರ್ಮಾ ಮತ್ತು ಉಪೇಂದ್ರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಐ ಆ್ಯಮ್ ಆರ್’ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮ. ಅದಕ್ಕೆ ಕಿಚ್ಚ ಸುದೀಪ್ ಅವರು ಮುಖ್ಯ ಅಥಿತಿ ಆಗಿದ್ದರು.

Advertisement
Advertisement

ಆ ವೇದಿಕೆಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತು ಪ್ರಸ್ತಾಪ ಆಯಿತು. ಅದಕ್ಕೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್ ಅವರು, ‘ಕನ್ನಡ ಚಿತ್ರರಂಗದ ಒಂದು ಸಿನಿಮಾವನ್ನು ಪ್ಯಾನ್ ಇಂಡಿಯಾ ಚಿತ್ರ ಅಂತ ಹೇಳಿದ್ದೀರಿ. ಅದಕ್ಕೆ ಒಂದು ಕರೆಕ್ಷನ್ ಇರಲಿ. ಯಾಕೆಂದರೆ ಈಗ ಹಿಂದಿ ರಾಷ್ಟ್ರ ಭಾಷೆ ಅಲ್ಲ. ಹಿಂದಿಯವರು ನಿಜವಾಗಿಯೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಚಿತ್ರವನ್ನು ತಮಿಳು, ತೆಲುಗಿಗೆ ಡಬ್ ಮಾಡಿ ಒದ್ದಾಡುತ್ತಿದ್ದಾರೆ. ಆಗ್ತಾ ಇಲ್ಲ’ ಎಂದು ಸುದೀಪ್ ಹೇಳಿದರು.

ಸುದೀಪ್ ಅವರ ಮಾತುಗಳು ಹಿಂದಿ ಸೆಲೆಬ್ರಿಟಿಗಳ ಕಿವಿ ತಲುಪುವ ಹೊತ್ತಿಗೆ ಬೇರೆಯದೇ ಸ್ವರೂಪ ಪಡೆದುಕೊಂಡಿತು. ನಟ ಅಜಯ್ ದೇವಗನ್ ಅವರು ಒಂದು ಲಾಜಿಕ್ ಇಲ್ಲದ ಪ್ರಶ್ನೆಯನ್ನು ಎತ್ತಿದರು.’ನನ್ನ ಸಹೋದರ ಕಿಚ್ಚ ಸುದೀಪ್ ಅವರೇ.. ನಿಮ್ಮ ಪ್ರಕಾರ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ನೀವೇಕೆ ರಿಲೀಸ್ ಮಾಡುತ್ತೀರಿ..? ಅಂದು, ಇಂದು ಎಂದೆಂದಿಗೂ ಹಿಂದಿಯೇ ನಮ್ಮ ರಾಷ್ಟ್ರ ಭಾಷೆ ಆಗಿರಲಿದೆ. ಜನ ಗಣ ಮನ’ ಎಂದು ಅಜಯ್ ದೇವಗನ್ ಟ್ವಿಟ್ ಮಾಡಿದರು. ಅವರ ಈ ಮಾತಿಗೆ ಅನೇಕರಿಂದ ಖಂಡನೆ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಜೋರಾಗಿದೆ.

.@KicchaSudeep मेरे भाई,
आपके अनुसार अगर हिंदी हमारी राष्ट्रीय भाषा नहीं है तो आप अपनी मातृभाषा की फ़िल्मों को हिंदी में डब करके क्यूँ रिलीज़ करते हैं?
हिंदी हमारी मातृभाषा और राष्ट्रीय भाषा थी, है और हमेशा रहेगी।
जन गण मन ।

— Ajay Devgn (@ajaydevgn) April 27, 2022

ದಕ್ಷಿಣದ ಭಾಷೆಗಳ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡುವುದು ಹಾಗೂ ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವುದು ಎರಡು ಪ್ರತ್ಯೇಕವಾದ ವಿಚಾರ. ಅದನ್ನು ಅಜಯ್ ದೇವಗನ್ ಅವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ಅನೇಕರು ಕಿವಿ ಹಿಂಡುತ್ತಿದ್ದಾರೆ.

And sir @ajaydevgn ,,
I did understand the txt you sent in hindi. Tats only coz we all have respected,loved and learnt hindi.
No offense sir,,,but was wondering what'd the situation be if my response was typed in kannada.!!
Don't we too belong to India sir.
🥂

— Kichcha Sudeepa (@KicchaSudeep) April 27, 2022

Advertisement
Previous Post

ಪುಂಜಾಲಕಟ್ಟೆ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ..!!

Next Post

(ಎ.30) ಮಠಂತಬೆಟ್ಟು: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ, ಜಾತ್ರೋತ್ಸವ ಹಾಗೂ ನೇಮೋತ್ಸವ

OtherNews

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!
ಪುತ್ತೂರು

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

June 19, 2025
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!
Featured

ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!

June 18, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!
ಕ್ರೈಮ್

ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!

April 14, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

July 1, 2025
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page