ಮಂಗಳೂರು: ಯುವಕನೊಬ್ಬನನ್ನು ತಂಡವೊಂದು ಕೊಲೆಗೈದ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ರೌಡಿ ಶೀಟರ್ ರಾಹುಲ್ ಹೊಯ್ಗೆ ಬಜಾರ್ ಎಂದು ಗುರುತಿಸಲಾಗಿದೆ.
![](https://zoomintv.online/wp-content/uploads/2022/04/IMG_20220428_201823.jpg)
ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದು ಅದನ್ನು ವೀಕ್ಷಿಸಲು ಆಗಮಿಸಿದ್ದ ರಾಹುಲ್ ನನ್ನು ನಾಲ್ವರು ದುಷ್ಕರ್ಮಿಗಳ ತಂಡ ಅಟ್ಟಿಸಿಕೊಂಡು ಬಂದು ಮೈದಾನದ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
![](https://zoomintv.online/wp-content/uploads/2022/04/WEB.jpg)
ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ಕೊಲೆ ಮಾಡಿರುಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.