ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಗೋವನ್ನು ರಕ್ಷಿಸಿದ ಘಟನೆ ಕನ್ಯಾನದ ಕೇಪುಳ ಗುಡ್ಡದಲ್ಲಿ ನಡೆದಿದೆ.
ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು, ದಾಳಿ ವೇಳೆ ಆರೋಪಿಗಳು ಪಿಕಪ್ ಬಿಟ್ಟು ಪರಾರಿಯಾಗಿದ್ದು, ಗೋವು ಮತ್ತು ಪಿಕಪ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.