ಕುಕ್ಕೆಸುಬ್ರಹ್ಮಣ್ಯ: ದೇವಸ್ಥಾನದಲ್ಲಿ ಮಲೆ ಕುಡಿಯ ಜನಾಂಗದ ಪಂಚಪರ್ವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸಿದರ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಮಲೆಕುಡಿಯ ಹಿತ ರಕ್ಷಣೆಯ ವೇದಿಕೆಯ ಸಂಚಾಲಕರಾದ ಪದ್ಮಕುಮಾರ ಗುಂಡಡ್ಕ ಪ್ರಸ್ತಾವಿಕವಾಗಿ ಮಾತನಾಡಿ, ದೇವಸ್ಥಾನ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವಾಗ ಭಕ್ತಿಯಿಂದ ಸೇವೆಸಲ್ಲಿಸಿದ ಜನಾಂಗ ಮಲೆಕುಡಿಯ ಜನಾಂಗ ಕಳೆದ ಎರಡೂ ತಿಂಗಳಿನಿಂದ ಏಕಾಎಕಿ ಸೇವೆಯಿಂದ ವಜಾಗೊಳಿಸಿದ್ದು, ಸಮುದಾಯಕ್ಕೆ ಮಾಡಿದ ಅನ್ಯಾಯ ಎಂದು ಆರೋಪಿಸಿದರು.

ಮಳೆನಾಡು ಹಿತ ರಕ್ಷಣ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡಿ, ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಇಪ್ಪತ್ತೇಳು ಜನರನ್ನು ಸೇವೆಯಿಂದ ವಜಾಗೊಳಿಸಿದ್ದು ಪ್ರಜಾಪ್ರಭುತ್ವಕ್ಕೆ ಮಾಡಿದದ್ರೋಹ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹೋರಾಟ ನಡೆಸುತ್ತೇವೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಮಾಣಿ, ಕುಕ್ಕೆ ಸುಬ್ರಹ್ಮಣ್ಯ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಅಶೋಕ ಆಚಾರ್ಯ, ಸಚಿನ್ ವಳಲಂಬೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.