ಮಂಗಳೂರು: ಕಂಟೈನರ್ ಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ.
ಮೃತರನ್ನು ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಎಂದು ಗುರುತಿಸಲಾಗಿದೆ.

ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.