ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಎಸ್.ಎಸ್.ಎಲ್. ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆಗೆ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನು ವಿರುದ್ದ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡುವುದಾಗಿ ಆರೋಪಿಸಿ ದೂರು ನೀಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ ಅವರ ನೇತೃತ್ವದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಪತ್ತೆಗೆ ಬಲೆ ಬೀಸಿದ್ದರು.
ಮೇ.5 ರಂದು ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಲೆಕ್ಕಿ ಎಂಬಲ್ಲಿಂದ ವಶಕ್ಕೆ ಪಡೆಯಲಾಗಿದೆ.
ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ ಸೋನಾವಣೆ ಮತ್ತು ಅಡಿಷನಲ್ ಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಎಎಸ್ಪಿ ಶಿವಾಂಶು ರಜಪೂತ ನೇತೃತ್ವದಲ್ಲಿ ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಹೆಚ್ ಈ ಎಸೈಗಳಾದ ಸಂದೀಪಕುಮಾರ್ ಶೆಟ್ಟಿ ಮಂಜುನಾಥ ಟಿ ಸಿಬ್ಬಂದಿಗಳಾದ ಡ್ಯಾನಿ ಪ್ರಾನ್ಸಿಸ್ ತಾವ್ರೂ ,ಪ್ರಸನ್ ,ಸೀತಾರಾಮ ಹೇಮರಾಜ,ಅಶೋಕ್,ಶ್ರೀಧರ ,ಕುಮಾರ ,ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್ಕುಮಾರ್ , ದಿವಾಕರ ರವರು ಭಾಗವಹಿಸಿದ್ದರು.