ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಸದಾಶಿವ ನೆಲ್ಲಿತ್ತಾಯ ರವರು ಮೇ.24 ರಂದು ರಾತ್ರಿ ನಿಧನರಾದರು.

ಸದಾಶಿವ ನೆಲ್ಲಿತ್ತಾಯ ರವರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಹಲವು ದಶಕಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

























