ಬಂಟ್ವಾಳ: ಆರ್.ಎಸ್.ಎಸ್.ಸಂಘಟನೆಯ ಬಗ್ಗೆ ಕೀಳು ಪದ ಉಪಯೋಗಿಸಿ ಮಾತನಾಡಿದವರ ಬಗ್ಗೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಪ್ರತಿಕ್ರಿಯೆ ನೀಡಿದ್ದು, ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಮಾತಿನ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಕಳೆದ 97 ವರ್ಷಗಳಿಂದ ದೇಶಕ್ಕಾಗಿ ಬದುಕುತ್ತಿರುವ, ಸೇವೆಯ ಕಣ್ಣ ಮುಂದೆ ಇಟ್ಟುಕೊಂಡು, ಕೋಟಿ ಕೋಟಿ ಜನರಿಗೆ ದೇಶಕ್ಕೋಸ್ಕರ ಬದುಕುವ ಚಿಂತನೆ ನಡೆಸುತ್ತಿರುವ ಏಕೈಕ ಸಂಸ್ಥೆ ಅದು ಆರ್.ಎಸ್.ಎಸ್.ಇದರ ಬಗ್ಗೆ ಮಾತನಾಡಲು ಇವರಲ್ಲಿ ಏನಿದೆ ನೈತಿಕತೆ ಎಂದು ಅವರು ಗುಡುಗಿದ್ದಾರೆ.
ಸುಮಾರು ವರ್ಷಗಳ ಹಿಂದೆ ಮುಸ್ಲಿಂ ದೇಶಕ್ಕೆ ಹೊರಟ ಎರಡು ವಿಮಾನಗಳು ರಾಜಸ್ಥಾನದಲ್ಲಿ ಅಪಘಾತ ನಡೆದ ಸಂದರ್ಭದಲ್ಲಿ ತಕ್ಷಣ ಅಲ್ಲಿ ಹೋಗಿದ್ದು ಆರ್.ಎಸ್.ಎಸ್.ಸಂಘಟನೆ, ಅಲ್ಲಿ ಹೋಗಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಶವ ಹಾಗೂ ಚಿನ್ನಾಭರಣಗಳನ್ನು ಅವರ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಿದ ಬಳಿಕ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಅಲ್ಲಿಗೆ ಬೇಟಿ ನೀಡಿ ಮೊತ್ತಮೊದಲ ಬಾರಿಗೆ ಆರ್.ಎಸ್.ಎಸ್.ಬಗ್ಗೆ ಹೊಗಳಿ ಮಾತನಾಡಿದ್ದರು ಎಂದರು.
ದೇಶ ವಿಭಜನೆಯ ಕಾರಣ ನಿತ್ಯ ನಿರಂತರ ತಲೆ ಬಿಸಿ ಆಗುವಂತೆ ಮಾಡಿದ್ದು ಕಾಂಗ್ರೇಸ್ ಅಲ್ವಾ,ಹೊರಗಿನಿಂದ ಆಕ್ರಮಣ, ಒಳಗಿನಿಂದ ಅಕ್ರಮಣ,ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಲು ಅವಕಾಶ ನೀಡಿ ದ್ದು ಕಾಂಗ್ರೇಸ್ ಅಲ್ವವೇ ಎಂದು ಪ್ರಶ್ನೆ ಮಾಡಿದರು.
ಮಳಲಿಯ ಮಸೀದಿಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೆ ಸಂಬಂಧಿಸಿದ ಕುರುಹುಗಳು ಸಿಕ್ಕಿದ ಕಾರಣಕ್ಕಾಗಿ ಅದನ್ನು ಒಪ್ಪಂದ ಮಾಡಿಕೊಂಡು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೇಳಿದ್ದಾರೆ. ಇಂತಹ ಅನೇಕ ಕೇಂದ್ರ ಗಳು ಇವೆ.ಎಲ್ಲವನ್ನೂ ಬಿಟ್ಟುಕೊಡುವ ಒಪ್ಪಂದಕ್ಕೆ ತಯಾರಿರಬೇಕು ಎಂದು ಅವರು ಪರೋಕ್ಷವಾಗಿ ಹೇಳಿದರು. ದೇವಸ್ಥಾನಕ್ಕೆ ಮತ್ತು ಮಸೀದಿ, ಚರ್ಚ್ ಗೆ ವ್ಯತ್ಯಾಸ ಇದೆ. ಅದು ಎರಡೂ ಕೂಡ ಪ್ರಾರ್ಥನಾ ಮಂದಿರಗಳು.ಅದು ಎಲ್ಲಿ ಬೇಕಾದರೂ ಮಾಡಬಹುದು. ಆದರೆ ದೇವಸ್ಥಾನ, ದೈವಸ್ಥಾನಗಳಿಗೆ ಇತಿಹಾಸ ಇರುವುದರಿಂದ ಅದೇ ಸ್ಥಳದಲ್ಲಿ ನಿರ್ಮಾಣವಾಗಬೇಕಾಗಿದೆ ಎಂದು ಅವರು ಹೇಳಿದರು.

























