ಮಂಗಳೂರು: ಅಕ್ರಮವಾಗಿ ರಕ್ತ ಚಂದನದ ತುಂಡುಗಳ ಸಾಗಾಟಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಅರಣ್ಯ ಸಂಚಾರಿದಳ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ರಾಜ್, ದಿನೇಶ್ ಕುಮಾರ್, ಕುಂಞಿ ಮುಹಮ್ಮದ್, ಅನಿಲ್ ಕುಮಾರ್, ಶಾಮೀರ್ ಎಸ್. ಬಂಧಿತರಾಗಿದ್ದಾರೆ. ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

ರಕ್ತ ಚಂದನದ ತುಂಡುಗಳನ್ನು ಲಾರಿಯಲ್ಲಿ ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಾಟಕ್ಕೆ ಯತ್ನ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳಿಂದ 4.15 ಕೋ.ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
8308.400 ಕೆ.ಜಿ ತೂಕದ 4.15 ಕೋ.ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದ್ದು, ಅಧಿಕಾರಿಗಳು ರಕ್ತಚಂದನದ 316 ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

























