ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರ ಸಂಪರ್ಕದ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕೇರಳ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಗಡಿಯತ್ತಲೂ ಹದ್ದಿನ ಕಣ್ಣಿಡಲು ಗುಪ್ತಚರ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.
ಮಂಗಳೂರು ಗಡಿ ಉಲ್ಲೇಖಿಸಿ ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಕೇರಳದ ಕೋವಲಂ ಮತ್ತು ಮಂಗಳೂರು ನಡುವೆ ಐಷಾರಾಮಿ ವಾಹನಗಳ ಅನುಮಾಸ್ಪದ ಓಡಾಟದ ಬಗ್ಗೆ ತಿಳಿಸಲಾಗಿದೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ ಮತ್ತು ನಗದು ಸಾಗಿಸಲು ವಾಹನ ಬಳಕೆ ಶಂಕಿಸಲಾಗಿದ್ದು, ಕೇರಳ ಕರಾವಳಿ ಮತ್ತು ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಸೂಚನೆ ನೀಡಲಾಗಿದೆ.
ಉಗ್ರರು ಕಪ್ಪು ಹಣವನ್ನು ಬಿಳಿ ಮಾಡಲು ಹೆದ್ದಾರಿ ಗೂಡಂಗಡಿ ಬಳಸುವ ಶಂಕೆ ಇದ್ದು, ಆಂಬ್ಯುಲೆನ್ಸ್ಗಳನ್ನು ಬಳಸಿಕೊಂಡು ಶಸ್ತ್ರಾಸ್ತ್ರ ಮತ್ತು ಹಣ ಕಳ್ಳಸಾಗಣೆ ಬಳಸೋ ಸಾಧ್ಯತೆ ಇದೆ ಎಂದು ಅಲರ್ಟ್ ಮಾಡಲಾಗಿದೆ. ಕರಾವಳಿ ಭಾಗದ ಅಂಗಡಿಗಳ ಮೇಲೆ ನಿಗಾ ಇಡಲು ಕೇಂದ್ರ ಗುಪ್ತಚರ ಸೂಚನೆ ನೀಡಿದ್ದು, ಹೆದ್ದಾರಿ ಬದಿಯ ಕೆಲ ಗೂಡಂಗಡಿಗಳಿಗೆ ಭಯೋತ್ಪಾದಕ ಸಂಘಟನೆಗಳ ನಂಟಿನ ಶಂಕೆ ವ್ಯಕ್ತಪಡಿಸಿದೆ.
ಐಶಾರಾಮಿ ವಾಹನಗಳು ರಾತ್ರಿ ಹೊತ್ತು ಗೂಡಂಗಡಿಗಳ ಬಳಿ ಹೆಚ್ಚು ಹೊತ್ತು ನಿಲ್ಲುತ್ತಿದ್ದು, ಗೂಡಂಗಡಿಗಳ ಜೊತೆ ಐಶಾರಾಮಿ ವಾಹನಗಳ ಅಕ್ರಮ ವ್ಯವಹಾರದ ಅನುಮಾನವನ್ನ ಗುಪ್ತಚರ ಇಲಾಖೆ ವರದಿ ವ್ಯಕ್ತಪಡಿಸಿದೆ. ಹೀಗಾಗಿ ಕೇರಳ ಕರಾವಳಿ ಮತ್ತು ಮಂಗಳೂರು ಗಡಿಗಳಲ್ಲಿ ಹದ್ದಿನ ಕಣ್ಣಿಡಲು ಸೂಚನೆ ನೀಡಿದ್ದು, ಕೇರಳ ಪೊಲೀಸ್ ಇಲಾಖೆಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

























