Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

June 9, 2022
in ಪುತ್ತೂರು, ರಾಜಕೀಯ
0
ಪುತ್ತೂರು: ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದೇಶದಲ್ಲಿ, ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಉದ್ಯೋಗ ಸೃಷ್ಟಿಯಗುತ್ತಿಲ್ಲ, ವಿದ್ಯಾವಂತ ಯವಕರು ಉದ್ಯೋಗವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರವೇ ನೇರ ಕಾರಣವಾಗಿದ್ದು ಉದ್ಯೋಗ ಕೇಳಿದ ಯುವಕರನ್ನು ರಾಜಕೀಯ ಮತ್ತು ಧರ್ಮದಂಗಲ್‌ಗೆ ಬಳಕೆ ಮಾಡಿ ಅವರ ಭವಿಷ್ಯಕ್ಕೆ ಕೊಳ್ಳಿ ಇಡುವ ಕೆಲಸ ನಿರಂತರ ನಡೆಯುತ್ತಿದೆ ಎಂದು ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಆರೋಪಿಸಿದರು.

Advertisement
Advertisement

ಅವರು ಜೂ.9 ರಂದು ಕುಂಬ್ರ ಜಂಕ್ಷನ್‌ನಲ್ಲಿ ಪುತ್ತೂರು, ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಚುನಾವಣೆಯ ಸಂದರ್ಭದಲ್ಲಿ ಯುವಕರಿಗೆ ಉದ್ಯೋಗದ ಭರವಸೆ ಕೊಟ್ಟ ಈಗಿನ ಶಾಸಕರು, ಸಂಸದರು ಗೆದ್ದ ಬಳಿಕ ಅವೆಲ್ಲವನ್ನೂ ಮರೆತಿದ್ದಾರೆ. ಜಿಲ್ಲೆಯಲ್ಲಿ ಹೂಡಿಕೆದಾರರು ಕಡಿಮೆಯಾಗುತ್ತಿದ್ದಾರೆ. ಕೇಂದ್ರ ಸರಕಾರದ ಆರ್ಥಿಕ ನೀತಿಯ ಕಾರಣಕ್ಕೆ ಸಣ್ಣ ಉದ್ಯಮಗಳು ಬಂದ್ ಆಗಿವೆ, ಗ್ರಾಮೀಣ ಭಾಗದ ಯುವಕರು ಕೆಲಸ ಮಾಡುತ್ತಿದ್ದ ಸಣ್ಣ ಸಂಸ್ಥೆಗಳು ಬಾಗಿಲು ಮುಚ್ಚಿದೆ ಇದಕ್ಕೆಲ್ಲಾ ಕಾರಣ ಬಿಜೆಪಿ ಸರಕಾರ ಮತ್ತು ಪ್ರಧಾನಿ ಮೋದಿಯವರೇ ಆಗಿದ್ದಾರೆ. ಎರಡು ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು ಯುವಕರಿಗೆ ಉದ್ಯೋಗ ಕೊಡದೆ ವಂಚನೆ ಮಾಡಿದ್ದಾರೆ. 15 ಲಕ್ಷ ಕೊಡುವುದಾಗಿ, ಅಕೌಂಟಿಗೆ ಹಾಕುವುದಾಗಿ ಮೋದಿ ಹೇಳಿದ್ದರು, 15 ಲಕ್ಷ ಬೇಡ ನಮ್ಮ ಯುವಕರಿಗೆ ಉದ್ಯೋಗ ಕೊಡಿ ಎಂದು ಆಗ್ರಹಿಸಿದರು.

Advertisement

ಉದ್ಯೋಗವಿಲ್ಲದೆ ಯುವಕರು ದಾರಿ ತಪ್ಪುತ್ತಿದ್ದಾರೆ. ವಿದ್ಯಾವಂತ ಯುವಕರನ್ನು ಬಿಜೆಪಿ ಧರ್ಮ ದಂಗಲ್‌ಗೆ ಬಳಕೆ ಮಾಡಿ ಅವರ ಜೀವನವನ್ನೇ ಹಾಳುಮಾಡುತ್ತಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮಕ್ಕಳ ಭವಿಷ್ಯವನ್ನು ಹಾಳು ಮಾಡುವವರ ಬಗ್ಗೆ ಸದಾ ನಿಗಾ ವಹಿಸಿ ಎಂದು ಹೇಳಿದರು.ದೇಶದಲ್ಲಿ ಧರ್ಮ, ಸಂಸ್ಕೃತಿ ಉಳಿಯಬೇಕಾದರೆ ಯುವಕರ ಕೈಗೆ ಉದ್ಯೋಗ ಕೊಡಿ ಎಂದು ಹೇಳಿದ ಅವರು ಬೀಡಿಕಾರ್ಮಿಕರು, ಕಟ್ಟಡ ಕಾರ್ಮಿಕರು, ಹೊಟೇಲ್ ಕಾರ್ಮಿಕರು, ಕೂಲಿ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದು ಅವರ ಬಾಳು ಬೆಳಗಬೇಕದರೆ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಅವಧಿಯಲ್ಲಿ ಜಾರಿಗೆ ತಂದ ಕಾರ್ಮಿಕ ಪರ ಕಾನೂನನ್ನು ಮೋದಿ ಸರಕಾರ ನಿಷ್ಕ್ರಿಯಗೊಳಿಸಿ ಕಾರ್ಮಿಕರನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಭಾರತ ಸಮೃದ್ದವಾಗಿ ಬೆಳೆಯುವಲ್ಲಿ ಕಾರ್ಮಿಕರ ಶ್ರಮವಿದೆ. ಕಾರ್ಮಿಕರ ಬೆವರು ಈ ದೇಶವನ್ನು ಅಭಿವೃದ್ದಿಪಥದತ್ತ ಕೊಂಡೊಯ್ದಿದೆ. ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಕಾರ್ಮಿಕರನ್ನು ಮೂಲೆಗುಂಪು ಮಾಡಿದೆ. ಇಂದು ದೇಶದಲ್ಲಿ ಕಾರ್ಮಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಪ್ರಧಾನಿ ಮೋದಿಯವರು ಅಂಬಾನಿ, ಅದಾನಿ ಪರ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸ್ಥಾಪಿಸಿದ ಎಲ್ಲಾ ಸಂಸ್ಥೆಗಳನ್ನು ಪ್ರಧಾನಿಗಳು ಅಂಬಾನಿ , ಅದಾನಿಗೆ ಮಾರಾಟ ಮಾಡುವ ಮೂಲಕ ದೇಶದ ಕಾರ್ಮಿಕರನ್ನು ಬೀದಿಗೆ ಬೀಳುವಂತೆ ಮಾಡಿದ್ದಾರೆ. ಮಂಗಳೂರಿನ ಏರ್‌ಪೋರ್ಟ್ ಕಾಂಗ್ರೆಸ್ ನಿರ್ಮಾಣ ಮಾಡಿತ್ತು, ಅಲ್ಲಿ ಸ್ಥಳೀಯರಿಗೇ ಕೆಲಸವನ್ನು ನೀಡಿತ್ತು ಆದರೆ ಕೇಂದ್ರದ ಬಿಜೆಪಿ ಸರಕಾರ ಏರ್‌ಪೋರ್ಟನ್ನು ಖಾಸಗಿಯವರಿಗೆ ಬಿಟ್ಟುಕೊಟ್ಟು ಮಾರ್ವಾಡಿಗಳಿಗೆ ಕೆಲಸವನ್ನು ನೀಡಿದೆ. ಜಿಲ್ಲೆಯಲ್ಲಿ ಅನೇಕ ಕಾರ್ಖಾನೆಗಳು ಬಾಗಿಲು ಮುಚ್ಚಿದ್ದರೆ ಅದಕ್ಕೆ ಕೇಂದ್ರ ಆರ್ಥಿಕ ನೀತಿಯೇ ಕಾರಣವಾಗಿದೆ ಎಂದು ಕಾಂಗ್ರೆಸ್‌ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

ದ ಕ ಜಿಲ್ಲೆಯ ನಿರುದ್ಯೋಗಿ ಯವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕಿದೆ. ಇಲ್ಲಿನ ಶಾಸಕರು, ಸಂಸದರು ಈ ವಿಚಾರದಲ್ಲಿ ಮಾತನಡಬೇಕಿದೆ. ಬೆಲೆ ಏರಿಕೆಯ ವಿಚಾರದಲ್ಲಿ ಬಿಜೆಪಿ ಮೌನವಾಗಿದೆ. ಬೆಲೆ ಏರಿಕೆ ಎಲ್ಲಾ ವರ್ಗಕ್ಕೂ ತಟ್ಟಿದೆ ಬಿಜೆಪಿಗರು ಆತ್ಮಸ್ಥೈರ್ಯದಿಂದ ಬೆಲೆ ಏರಿಕೆ ವಿರುದ್ದ ಪ್ರತಿಭಟನೆಯನ್ನು ನಡೆಸುವ ಮೂಲಕ ನಾವು ಜನರ ಪರ ಇದ್ದೇವೆ, ಬೆಲೆ ಏರಿಕೆಯ ವಿರುದ್ದ ಇದ್ದೇವೆ ಎಂಬುದನ್ನು ತೋರ್ಪಡಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮವದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ ಯವರುಗಳು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿದರು. ಯುವಕರ ಕೈಗೆ ಉದ್ಯೋಗ ಕೊಡಿ ಎಂಬ ಆಗ್ರಹವನ್ನು ವ್ಯಕ್ತಪಡಿಸಿದರು. ನಿರುದ್ಯೋಗಿ ಯುವಕರನ್ನು ಕೆಟ್ಟ ಕೆಲಸಗಳಿಗೆ ಬಳಸದೆ ಅವರ ಭವಿಷ್ಯವನ್ನು ರೂಪಿಸುವ ಕೆಲಸ ಬಿಜೆಪಿ ಮಾಡಬೇಕಿದೆ. ನೀವು ಚುನಾವಣೆಯ ವೇಳೆ ಕೊಟ್ಟ ಭರವಸೆಯಂತೆ ಅವರಿಗೆ ಉದ್ಯೋಗವನ್ನು ಕೊಡಿ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ, ವಲಯ ಕಾಂಗ್ರೆಸ್ ಕಾರ್ಯದರ್ಶಿ ಸಲಾಂ ಕುಂಬ್ರ, ಕಾರ್ಮಿಕ ಘಟಕದ ವಿಟ್ಲ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ, ವಿವಿಧ ಘಟಕದ ಪದಾಧಿಕಾರಿಗಳಾದ ಮೆಲ್ವಿನ್ ಮೊಂತೆರೋ, ಇಸ್ಮಾಯಿಲ್ ಗಟ್ಟಮನೆ, ಸಿದ್ದಿಕ್ ಕೂಡುರಸ್ತೆ, ಸಂತೋಷ್ ರೈ ಚಿಲ್ಮೆತ್ತರು, ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಮಹಮ್ಮದ್ ಬೊಳ್ಳಾಡಿ, ಹಬೀಬ್ ಕಣ್ಣೂರು,ರಶೀದ್ ಮುರ, ಜಯಂತಿ ಬಲ್ನಾಡು, ರಾಮಚಂದ್ರ ಸೊರಕೆ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು. ಪುತ್ತೂರು ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೂನ್ ಸಿಕ್ವೇರಾ ಸ್ವಾಗತಿಸಿ ವಂದಿಸಿದರು.

ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

Advertisement
Advertisement
Previous Post

ಯುವ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು…!!??ಬೆಂಗಳೂರು, ಮಂಗಳೂರು ಪೊಲೀಸರಿಂದ ತನಿಖೆ ಆರಂಭ: ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ – ಮನ್ಮಿತ್ ರೈ

Next Post

(ಜೂ.11) ಉಪ್ಪಳಿಗೆ: ಶ್ರೀ ವಿಷ್ಣು ಯುವಕ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ: ‘ಪರಕೆ ಪೂವಕ್ಕೆ’ ತುಳು ಹಾಸ್ಯಮಯ ನಾಟಕ ಪ್ರದರ್ಶನ

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.