ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ರಾಷ್ಟ್ರಪತಿಗಳಿಗೆ ಪುತ್ತೂರು ಉಪವಿಭಾಗ ಸಹಾಯಕ ಕಮೀಷನರ್ ಮೂಲಕ ಮನವಿ ಸಲ್ಲಿಸಲಾಯಿತು.

ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಹಿಂಸಾಚಾರ ಹೆಚ್ಚುತ್ತಿದೆ, ಅಷ್ಟೇ ಅಲ್ಲದೇ ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ. ಭಗವಾನ್ ಶ್ರೀರಾಮನ ಹಬ್ಬವಾದ ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ಮತ್ತು ವ್ಯವಸ್ಥಿತವಾಗಿ ದಾಳಿಗಳನ್ನು ನಡೆಸಲಾಯಿತು. ಇದರಿಂದಾಗಿ ಹಲವೆಡೆ ಕರ್ಫ್ಯೂ ವಿಧಿಸಲಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಂದೂ ಸಮಾಜವು ತಾಳ್ಮೆಯನ್ನು ಕಾಯ್ದುಕೊಂಡಿತು. ಇದರಿಂದಾಗಿ ಯಾವುದೇ ದೊಡ್ಡ ಅಹಿತಕರ ಘಟನೆಗಳು ಸಂಭವಿಸಲಿಲ್ಲ. ನಂತರ ಕೆಲವೆಡೆ ಹನುಮ ಜಯಂತಿಯ ಮೆರವಣಿಗೆ ಮೇಲೆ ಕಲ್ಲು ತೂರಾಟವೂ ನಡೆಯಿತು. ಹಿಂದೂ ಸಮಾಜವು ತಮ್ಮ ದೇಶದಲ್ಲಿ ತಮ್ಮ ದೇವತೆಗಳ ಮೆರವಣಿಗೆಯನ್ನು ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕದಲ್ಲಿ ಹಿಜಾಬ್ ವಿವಾದದ ಸಂದರ್ಭದಲ್ಲೂ ಭಜರಂಗದಳದ ಕಾರ್ಯಕರ್ತ ಹರ್ಷ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಹಿಂದೂಗಳ ಮೇಲೆ ಹಲವೆಡೆ ದಾಳಿಗಳು ನಡೆದವು. ಸಹೋದರಿ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ಹೇಳಿಕೆಗಳ ಮೇಲೆ, ಕಳೆದ ಎರಡು ಶುಕ್ರವಾರದಂದು ಪ್ರಾರ್ಥನೆಯ ನಂತರ ಮಸೀದಿಗಳಿಂದ ಹೊರ ಬಂದವರು ಹಿಂದೂ ಮನೆಗಳು, ಅಂಗಡಿಗಳು, ವಾಹನಗಳಿಗೆ ದಾಳಿ ಮಾಡಿ ಬೆಂಕಿ ಹಚ್ಚುತ್ತಿದ್ದಾರೆ. ಸರ್ಕಾರಿ ಆಸ್ತಿ, ದೇವಸ್ಥಾನಗಳಿಗೂ ಅಪಾರ ಹಾನಿಯಾಗಿದೆ. ಪೊಲೀಸ್ ಪಡೆಗಳ ಮೇಲೂ ದಾಳಿ ನಡೆಸಲಾಯಿತು. ಹಲವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಬಂಗಾಳ, ಕೇರಳದಂತಹ ರಾಜ್ಯಗಳ ಸರಕಾರಗಳು ಈ ಇಸ್ಲಾಮಿಕ್ ನವರೊಂದಿಗೆ ನಿಂತಿರುವುದು ಕಂಡು ಬರುತ್ತದೆ. ಆದರೆ ಹಿಂದೂ ದೇವರು ಮತ್ತು ದೇವತೆಗಳ ಬಗ್ಗೆ ಅನೇಕ ಧರ್ಮದ್ರೋಹಿಗಳಿಂದ ಅನಿಯಂತ್ರಿತ ಪ್ರಚಾರವನ್ನು ಮಾಡಲಾಗುತ್ತಿದೆ. ಕೋಮು ದ್ವೇಷ ಹರಡುವ ಹೇಳಿಕೆಗಳನ್ನು ನೀಡಲಾಗಿದ್ದರೂ ದೇಶದ ಹಲವು ಜಾತ್ಯತೀತ ಪಕ್ಷಗಳು ಮೌನ ವಹಿಸಿವೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಹಲವು ರಾಜಕೀಯ ಪಕ್ಷಗಳು ಕಳೆದೆರಡು ಶುಕ್ರವಾರ ನಡೆದ ಪ್ರಜಾಪ್ರಭುತ್ವದ ಕೊಲೆಗೆ ಮೌನ ವಹಿಸಿವೆ.
ಈ ದಾಳಿಗಳಿಂದ ಇಡೀ ದೇಶದ ಹಿಂದೂ ಸಮಾಜಕ್ಕೆ ನೋವಾಗಿದೆ ಮತ್ತು ಆಕ್ರೋಶಭರಿತರಾಗಿದ್ದಾರೆ. ದೇಶದಾದ್ಯಂತ ಹಿಂದೂ ಸಮಾಜವು ಈ ಘಟನೆಗಳ ವಿರುದ್ಧ ಈ ಧರಣಿ ಮತ್ತು ಜ್ಞಾಪಕ ಪತ್ರದ ಮೂಲಕ ತನ್ನ ಆಕ್ರೋಶವನ್ನು ವ್ಯಕ್ತಪಡಿಸುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
- (1) ಕೊನೆಯ ಎರಡು ಜುಮ್ಮಾಗಳ ಪ್ರಾರ್ಥನೆಯ ನಂತರ, ಮಸೀದಿಗಳಿಂದ ಹೊರಬಂದ ಉದ್ರಿಕ್ತ ಗುಂಪುಗಳು ಮತ್ತು ಗಲಭೆಕೋರರನ್ನು ಗುರುತಿಸಬೇಕು ಮತ್ತು ಅವರ ವಿರುದ್ಧ ರಾಷ್ಟ್ರೀಯ ಸುರಕ್ಷತಾ ಕಾಯಿದೆ (ರಾಸುಕಾ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು.
- (2) ಅವರನ್ನು ಪ್ರಚೋದಿಸುವ ಮುಲ್ಲಾಗಳು / ಧರ್ಮಗುರುಗಳು / ಇತರ ಮುಸ್ಲಿಂ ಮತ್ತು ಜಾತ್ಯತೀತ ನಾಯಕರ ಗುರುತಿಸುವಿಕೆ ಅವರ ಮೇಲೆ ರಾಷ್ಟ್ರೀಯ ಸುರಕ್ಷತಾ ಕಾಯಿದೆ (ರಾಸುಕಾ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು.ಮತ್ತು ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು.
- (3) ನಾಳೆ ಜೂನ್ 17 ರಂದು, ಶುಕ್ರವಾರದ ಪ್ರಾರ್ಥನೆಯ ನಂತರ ಹೊರಬರುವ ಜನಸಮೂಹವನ್ನು ಮೇಲ್ವಿಚಾರಣೆ ಮಾಡಬೇಕು ಮತ್ತು ಮುಲ್ಲಾಗಳು / ಮೌಲ್ವಿಗಳು ಅಥವಾ ಬೇರೆ ಯಾರಾದರೂ ಜಿಹಾದಿ ಭಾಷಣಗಳನ್ನು ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು.
- (4) ದೇಶಾದ್ಯಂತ ಇಂತಹ ವಿಷಪೂರಿತ ಭಾಷಣ ಮಾಡುವವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.
- (5) ಬೆದರಿಕೆಗೆ ಒಳಗಾದವರಿಗೆ ಭದ್ರತೆಯನ್ನು ಒದಗಿಸಬೇಕು ಮತ್ತು ಬೆದರಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
- 6 ) ಕೋಮುದ್ವೇಷ ಹರಡುವ / ಗಲಭೆಗೆ ಪ್ರಚೋದನೆ ನೀಡುವ ಮಸೀದಿ / ಮದರಸಗಳನ್ನು ಎನ್ ಐಎ ತನಿಖೆಗೆ ಒಳಪಡಿಸಬೇಕು
- (7) ಇಸ್ಲಾಮಿಕ್ ಜಿಹಾದಿ ಮತಾಂಧತೆಯನ್ನು ಹರಡುವ ಮೂಲಕ ದೇಶದಲ್ಲಿ ಹಿಂಸಾಚಾರವನ್ನು ಹರಡುತ್ತಿರುವ ಜಮಿಯತ್ ಉಲೇಮಾ-ಎ-ಹಿಂದ್ (ಮದನಿ), ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ತಬ್ಲೀಘಿ ಜಮಾತ್ನಂತಹ ಮೂಲಭೂತವಾದಿ ಸಂಘಟನೆಗಳ ಮೇಲೆ ತಕ್ಷಣವೇ ನಿಷೇಧ ಹೇರಬೇಕು. ಮತ್ತು ಅವುಗಳ ನಿಷೇಧಕ್ಕೆ ಕ್ರಮಕೈಗೊಳ್ಳಬೇಕು
- (8) ಹಿಂದೂಗಳು ಅಲ್ಪಸಂಖ್ಯಾತರಾಗಿರುವ ಸ್ಥಳಗಳಲ್ಲಿ ಹಿಂದುಗಳಿಗೆ ಭದ್ರತೆಗೆ ವ್ಯವಸ್ಥೆಗಳನ್ನು ಮಾಡಬೇಕು ಮತ್ತು ಕಡ್ಡಾಯವಾಗಿ ಪೊಲೀಸರನ್ನು ನಿಯೋಜಿಸಿಬೇಕು ಮತ್ತು ಯೋಜಿಸಲಾದ ಭದ್ರತಾ ಸಿಬ್ಬಂದಿಗೆ ಸಾಕಷ್ಟು ಸೌಲಭ್ಯಗಳು ಮತ್ತು ಹಕ್ಕುಗಳನ್ನು ನೀಡಬೇಕು. ಮೇಲಿನ ಬೇಡಿಕೆಗಳ ಕುರಿತು ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ಉಪವಿಭಾಗ ಸಹಾಯಕ ಕಮೀಷನರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಉಪಾಧ್ಯಕ್ಷರಾದ ಸೇಸಪ್ಪ ಬೆಳ್ಳಿಪ್ಪಾಡಿ, ನಗರ ಪ್ರಖಂಡ ಬಜರಂಗದಳ ಸಂಯೋಜಕ್ ಹರೀಶ್ ಕುಮಾರ್ ದೊಳ್ಪಾಡಿ, ವಿಶ್ವ ಹಿಂದೂ ಪರಿಷದ್ ಪುತ್ತೂರು ಗ್ರಾಮಾಂತರ ಪ್ರಖಂಡ ಸಹ ಕಾರ್ಯದರ್ಶಿ ರವಿಕುಮಾರ್ ಕೈತ್ತಡ್ಕ ಕೆಯ್ಯೂರು ಉಪಸ್ಥಿತರಿದ್ದರು.

























