ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಮತ್ತು ಉಡುಪಿ ಜಿಲ್ಲೆಯಲ್ಲಿ ಒಬ್ಬರು ತಹಶೀಲ್ದಾರ್ ರನ್ನು ವರ್ಗಾವಣೆ ಮಾಡಲಾಗಿದೆ.
ಪುತ್ತೂರು ತಾಲೂಕಿನ ತಹಶೀಲ್ದಾರ್ ರಮೇಶ್ ಬಾಬು ರವರು ವರ್ಗಾವಣೆಗೊಂಡ ಹಿನ್ನೆಲೆ ಅವರ ಸ್ಥಾನಕ್ಕೆ ನಿಸರ್ಗ ಪ್ರಿಯ ಜೆ. ರವರು ನಿಯುಕ್ತಿಗೊಂಡಿದ್ದಾರೆ.
ನಿಸರ್ಗ ಪ್ರಿಯ ರವರು ಈ ಮೊದಲು ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿಷ್ಟಾಚಾರ ತಹಶೀಲ್ದಾರ್ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ
ಕೋಶದ ಪುರಸಭಾ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಮ್ ಅವರನ್ನು ಬೆಳ್ತಂಗಡಿ ತಾಲೂಕು ಗ್ರೇಡ್-1 ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಗ್ರೇಡ್-1 ತಹಶೀಲ್ದಾರ್ ಆಗಿದ್ದ ಜೆ. ಮಹೇಶ್ ರವರಿಗೆ ಸರ್ಕಾರದದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಬೈಂದೂರು ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿದ್ದ ಶೋಭಾ
ಲಕ್ಷ್ಮೀ ಹೆಚ್.ಎಸ್. ರವರನ್ನು ಸೊರಬ ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಕಂದಾಯ ಇಲಾಖೆಯಲ್ಲಿ ಒಟ್ಟು 39 ಗ್ರೇಡ್-1 ಮತ್ತು ಗ್ರೇಡ್-2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.