ಪುತ್ತೂರು: ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ ವೈದ್ಯರಿಗೆ ಕೊಡುವ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಅವಾರ್ಡ್’ ಈ ಬಾರಿ ಪುತ್ತೂರಿನ ಖ್ಯಾತ ವೈದ್ಯರಾದ ಡಾ. ಪ್ರಸಾದ್ ಭಂಡಾರಿ ರವರಿಗೆ ಒಲಿದಿದ್ದು, ಈ ಹಿನ್ನೆಲೆ ಜೂ.28 ರಂದು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಆದರ್ಶ ಆಸ್ಪತ್ರೆಗೆ ತೆರಳಿ ಡಾ. ಪ್ರಸಾದ್ ಭಂಡಾರಿ ಯವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ನಗರ ಸಭಾ ಸದಸ್ಯ ಪ್ರೇಮ್ ಕುಮಾರ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಪುರುಷೋತ್ತಮ ಮುಂಗ್ಲಿಮನೆ, ವಿಶ್ವನಾಥ, ಜಯಶ್ರೀ ಶೆಟ್ಟಿ, ರಾಮದಾಸ್ ಹಾರಾಡಿ, ಆದರ್ಶ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.